– ಡಾ. ಎಸ್.ಪಿ. ಯೋಗಣ್ಣ ಮನುಷ್ಯ ಇಂದು ಹಲವಾರು ಸೋಂಕು ರೋಗಗಳಿಗೀಡಾಗುತ್ತಿದ್ದಾನೆ. 19ನೇ ಶತಮಾನ ಮತ್ತು 20ನೇ ಶತಮಾನದ ಪ್ರಾರಂಭದಲ್ಲಿ ಸಿಡುಬು, ಪ್ಲೇಗ್, ಪೋಲಿಯೋ ಇತ್ಯಾದಿ ಸೋಂಕು ರೋಗ ಗಳಿಗೀಡಾಗು ತ್ತಿದ್ದು, ಅವುಗಳನ್ನು ನಿರ್ಮೂಲನೆ ಮಾಡಿದ ಮೇಲೆ ಹೊಸ ಹೊಸ ಭಯಾನಕ ಸೋಂಕು ರೋಗ ಗಳು ಇಂದು ಜನ್ಮತಾಳುತ್ತಿವೆ. ಸೋಂಕಾಣುಗಳು ಸೂಕ್ಷ್ಮಜೀವಿ ನಿರೋಧಕ ಔಷಧಗಳಿಗೆ ಪ್ರತಿರೋಧತ್ವ ವನ್ನು ರೂಢಿಸಿಕೊಂಡು ನಾಶವಾಗದೆ ಉಳಿಯುವ ಉಪಾಯಮಾರ್ಗಗಳನ್ನು ಕಂಡುಕೊಳ್ಳುತ್ತಿವೆ. ಇದು ಹೊಸ ಹೊಸ ಸೂಕ್ಷ್ಮಜೀವಿ ನಿರೋಧಕ ಔಷಧಗಳ ಅನ್ವೇಷಣೆಗಳಿಗೆ ನಾಂದಿಯಾಗುತ್ತಿದೆ. ಸೂಕ್ಷ್ಮಜೀವಿಗಳೂ…
ಕೇರಳದಲ್ಲಿ ನಿಫಾ ವೈರಸ್ಗೆ ಮತ್ತೊಂದು ಬಲಿ: ಮೃತರ ಸಂಖ್ಯೆ 16ಕ್ಕೆ ಏರಿಕೆ
June 1, 2018ಕೋಯಿಕ್ಕೋಡ್: ಮಾರಣಾಂತಿಕ ನಿಫಾ ವೈರಸ್ ಕೇರಳದಲ್ಲಿ ತನ್ನ ಮರಣ ಮೃದಂಗ ಮುಂದುವರೆಸಿದ್ದು, ಸೋಂಕು ಪೀಡಿತರೊಬ್ಬರು ಸಾವನ್ನಪ್ಪುವ ಮೂಲಕ ಮೃತಪಟ್ಟವರ ಸಂಖ್ಯೆ ಇದೀಗ 16ಕ್ಕೆ ಏರಿಕೆಯಾಗಿದೆ. ನಿಫಾ ವೈರಸ್ನಿಂದ ಹರಡುವ ಸೋಂಕಿಗೆ ಕೇರಳದಲ್ಲಿ ಗುರುವಾರ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾದಂತಾಗಿದೆ. ಕೇರಳದ ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಸೋಂಕು ಪೀಡಿತರಾಗಿ ಚಿಕಿತ್ಸೆ ಪಡೆಯುತ್ತಿದ್ದ ನದುವನ್ನೂರು ನಿವಾಸಿ ರಶೀನ್(25 ವರ್ಷ) ಎನ್ನುವವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿನ್ನೆಯಷ್ಟೇ ಇದೇ ಮಾರಣಾಂತಿಕ ವೈರಾಣು ಸೋಂಕಿಗೆ ಟಿ.ಪಿ. ಮಧುಸೂದನ್…
ಕೇರಳದಲ್ಲಿ ನಿಫಾ ರುದ್ರ ನರ್ತನ: ಮೈಸೂರಿನಲ್ಲಿ ಗರಿಗೆದರಿದ ಪ್ರವಾಸೋದ್ಯಮ
May 28, 2018ಮೈಸೂರು: ಕೇರಳದಲ್ಲಿ ನಿಫಾ ವೈರಾಣುವಿನ ರುದ್ರ ನರ್ತನದಿಂದಾಗಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ವಿವಿಧ ರಾಜ್ಯಗಳ ಪ್ರವಾಸಿಗರು ಕೇರಳಕ್ಕೆ ಹೋಗುವುದನ್ನು ಮೊಟಕುಗೊಳಿಸಿ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಾಸ್ತವ್ಯ ಹೂಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳು ಗಿಜಿಗುಡುತ್ತಿವೆ. ಪ್ರವಾಸಿಗರಿಗೆ ಅಚ್ಚುಮೆಚ್ಚಿನ ತಾಣವಾಗಿರುವ ಕೇರಳಕ್ಕೆ ಹೋಗುವ ಪ್ರವಾಸಿಗರಿಗೆ ನಿಫಾ ವೈರಸ್ ಕಂಟಕವಾಗಿ ಕಾಡಲಾರಂಭಿಸಿದ್ದು, ಕೇರಳಕ್ಕೆ ಬರದಂತೆ ತಡೆಯೊಡ್ಡಿದೆ. ಕಳೆದ ಮೂರ್ನಾಲ್ಕು ತಿಂಗಳ ಹಿಂದೆಯೇ ಆನ್ಲೈನ್ ಮೂಲಕ ಬುಕ್ ಮಾಡಿದ್ದ ವಿವಿಧ…
ಹೆಚ್.ಡಿ.ಕೋಟೆ ಯುವಕನಿಗೆ ನಿಫಾ ವೈರಸ್ ಇಲ್ಲ ಕೆ.ಆರ್.ಆಸ್ಪತ್ರೆ ವೈದ್ಯರ ಸ್ಪಷ್ಟನೆ
May 28, 2018ಮೈಸೂರು: ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ತೆರೆಯಲಾಗಿರುವ ನಿಫಾ ಸೋಂಕಿತರ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ಡಿ.ಕೋಟೆಯ ಯುವಕನಿಗೆ ನಿಫಾ ಸೋಂಕು ಇಲ್ಲದೇ ಇರುವುದು ದೃಢಪಟ್ಟಿದ್ದು, ವೈದ್ಯರು ನಿಟ್ಟುಸಿರು ಬಿಟ್ಟಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದ ರಘು(18) ಎಂಬ ಯುವಕ ಕಳೆದ ಮೂರ್ನಾಲ್ಕು ದಿನಗಳಿಂದ ತೀವ್ರ ತೆರನಾದ ಜ್ವರದಿಂದ ಬಳಲುತ್ತಿದ್ದು, ನಿಫಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿತ್ತು. ವೈರಾಣು ಜ್ವರದಿಂದ ಬಳಲುತ್ತಿದ್ದ ಈ ಯುವಕನಲ್ಲಿ ಬ್ರೈನ್ ಫಿವರ್ ಕಾಣ ಸಿಕೊಂಡಿತ್ತು. ಮೇಲ್ನೋಟಕ್ಕೆ ನಿಫಾ ವೈರಾಣು ತಗುಲಿರುವ ರೋಗಿಯಂತೆ…
ನಿಫಾ: ಶಂಕಿತರ ಆರೋಗ್ಯದ ಮೇಲೆ ತೀವ್ರ ನಿಗಾ
May 28, 2018ಗುಂಡ್ಲುಪೇಟೆ: ನಿಫಾ ವೈರಸ್ ಶಂಕಿತರ ಆರೋಗ್ಯ ತಪಾ ಸಣೆ ಹಾಗೂ ಅವರಿಂದ ರಕ್ತ, ಉಗುಳು, ಮೂತ್ರ ಹಾಗೂ ಮೆದುಳಿನ ಸ್ರಾವಗಳ ಮಾದರಿ ಸಂಗ್ರಹಿಸಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾ ಧಿಕಾರಿ ಡಾ.ನಾಗರಾಜು ತಿಳಿಸಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿಗಳಿಗೂ ಈ ಬಗ್ಗೆ ಎಚ್ಚರಿಕೆಯಿಂದ ಇರಲು ಸೂಚಿಸ ಲಾಗಿದೆ. ಕೇರಳದಿಂದ ಬರುವ ಜನರ ಬಗ್ಗೆ ನಿಗಾ ವಹಿಸಲಾಗಿದ್ದು ಅವರನ್ನು ಗಮ ನಿಸಲಾಗುತ್ತಿದೆ. ವೈರಸ್…
ನಿಫಾ ವೈರಸ್ಗೆ ಕೇರಳದಲ್ಲಿ ಮತ್ತೊಂದು ಬಲಿ, ಸಾವಿನ ಸಂಖ್ಯೆ 13ಕ್ಕೆ ಏರಿಕೆ!
May 28, 2018ಕೊಯಿಕ್ಕೋಡ್: ದೇವರನಾಡು ಕೇರಳ ದಲ್ಲಿ ಮಾರಣಾಂತಿಕ ನಿಫಾ ವೈರಾಣು ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಭಾನುವಾರ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಕೇರಳದ ಕೊಯಿಕ್ಕೋಡ್ನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನಿಫಾ ವೈರಾಣು ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ 26 ವರ್ಷದ ಅಬಿನ್ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಆ ಮೂಲಕ ನಿಫಾ ವೈರಾಣು ಸೋಂಕಿಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾದಂತಾಗಿದೆ. ಇನ್ನು ಮೃತ ಅಬಿನ್, ಕೇರಳದ ಪಾಲಾಳಿ ಜಿಲ್ಲೆಯ ನಿವಾಸಿಯಾಗಿದ್ದು, ಖಾಸಗಿ ವೈದ್ಯಕೀಯ…
ನಿಫಾ ಮಹಾ ಮಾರಿ ಭೀತಿ ಮೈಸೂರು ಮೃಗಾಲಯದಲ್ಲಿ ಕಟ್ಟೆಚ್ಚರ
May 27, 2018* ಪ್ರವೇಶ ದ್ವಾರ, ಮರಗಳಿಗೆ ಔಷಧಿ ಸಿಂಪಡಣೆ * ಮರಗಳಲ್ಲಿದ್ದ ಹಣ್ಣುಗಳ ತೆರವು ಮೈಸೂರು: ಕೇರಳದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಾರಣಾಂತಿಕ ರೋಗ ನಿಫಾ ವೈರಾಣು ಬರದಂತೆ ಮೈಸೂರು ಮೃಗಾಲಯದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಮೃಗಾಲಯದ ಪ್ರವೇಶ ದ್ವಾರದಲ್ಲಿ ವೈರಾಣು ನಾಶ ಮಾಡುವ ಔಷಧಿ ಸಿಂಪಡಿಸಿರುವ ನೆಲಹಾಸು ಹಾಸಿರುವುದಲ್ಲದೆ, ಬಾವಲಿಗಳಿರುವ ಮರದ ಸುತ್ತಲೂ ಮುನ್ನೆಚ್ಚರಿಕಾ ಕ್ರಮವಾಗಿ ಔಷಧಿ ಸಿಂಪಡಿಸುವುದಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮಲೇಷಿಯಾ ಹಾಗೂ ಕೇರಳದಲ್ಲಿ ಕಾಡುತ್ತಿರುವ ನಿಫಾ ಅಥವಾ ಬಾವಲಿ ಜ್ವರ ಹಲವಾರು ಅಮಾಯಕರನ್ನು ಬಲಿ…
ನಿಫಾ ವೈರಸ್; ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ, ಆತಂಕ ಬೇಡ
May 26, 2018ಮೈಸೂರು: ಕೇರಳದಲ್ಲಿ ಆತಂಕ ಸೃಷ್ಟಿಸಿರುವ ನಿಫಾ ವೈರಸ್ ಬಗ್ಗೆ ಮೈಸೂರು ನಗರದ ಜನತೆ ಆತಂಕಪಡುವ ಅಗತ್ಯವಿಲ್ಲ. ಇದುವರೆಗೆ ನಿಫಾ ವೈರಸ್ನ ಯಾವೊಂದು ಪ್ರಕರಣವೂ ಕಂಡು ಬಂದಿಲ್ಲ. ಆದರೂ ಈ ಬಗ್ಗೆ ಮೈಸೂರು ನಗರಪಾಲಿಕೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಗುರುವಾರ ಸಂಜೆ ಪಾಲಿಕೆ ಆಯುಕ್ತ ಕೆ.ಹೆಚ್. ಜಗದೀಶ್ ಅಧ್ಯಕ್ಷತೆಯಲ್ಲಿ ಪಾಲಿಕೆ ಆರೋಗ್ಯಾಧಿಕಾರಿಗಳು, ಪಶುವೈದ್ಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಲಾಯಿತು. ಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿಫಾ ವೈರಸ್ ಮೈಸೂರು ನಗರದಲ್ಲಿ ಹರಡದಂತೆ ಕೈಗೊಳ್ಳಬಹುದಾದ…
ನಿಫಾ ಭೀತಿ: ಉತ್ತರ ಕೇರಳದತ್ತ ಸುಳಿಯದಂತೆ ರಾಜ್ಯ ಪ್ರವಾಸಿಗರಿಗೆ ಎಚ್ಚರಿಕೆ
May 25, 2018ಬೆಂಗಳೂರು: ಉತ್ತರ ಕೇರಳದಲ್ಲಿ ನಿಫಾ ಭೀತಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಿಂದ ಆ ಭಾಗಕ್ಕೆ ಪ್ರವಾಸಿಗರು ತೆರಳದಂತೆ ಸರ್ಕಾರ ಎಚ್ಚರಿಸಿದೆ. ಕೇರಳದ ಕಣ್ಣೂರು, ವಯನಾಡು, ಕೋಳಿಕ್ಕೋಡ್, ಮಲಪ್ಪುರಂನಲ್ಲಿ ನಿಫಾ ವೈರಸ್ ಹರಡಿರುವ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂತಹ ಸೂಚನೆ ನೀಡಿದೆ. ನಿಫಾ ವೈರಸ್ಗೆ ಸಂಬಂಧಿಸಿದಂತೆ ಇಂದು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಸರ್ಕಾರ ಇಂತಹ ತೀರ್ಮಾನ ಕೈಗೊಂಡಿದೆ. ನಿಫಾ ಪತ್ತೆಗಾಗಿ ರಾಜ್ಯ ಆರೋಗ್ಯ ಇಲಾಖೆ ರಚಿಸಿದ್ದ ಕ್ಷಿಪ್ರ ಪರಿಶೀಲನಾ…
ನಿಫಾ: ಮುಂಜಾಗ್ರತೆ ವಹಿಸಲು ಡಿಸಿ ಸೂಚನೆ
May 25, 2018ಹಾಸನ: ದಕ್ಷಿಣ ರಾಜ್ಯಗಳಲ್ಲಿ ಆತಂಕ ಮೂಡಿಸಿ ರುವ ಮಾರಣಾಂತಿಕ ನಿಫಾ ವೈರಸ್ ಸೋಂಕು ಹರಡದಂತೆ ಎಲ್ಲರೂ ಮುಂಜಾಗ್ರತೆ ವಹಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫರ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಿಫಾ ಸೋಂಕು ನಿಯಂತ್ರಣ ಕುರಿತು ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ನಿಫಾ ವೈರಾಣು ಅತ್ಯಂತ ಅಪಾಯಕಾರಿ ಎಂದು ಈಗಾಗಲೇ ದೃಢಪಟ್ಟಿದೆ. ಕೇರಳ ರಾಜ್ಯದಿಂದ ಇದು ಪ್ರಾರಂಭವಾಗಿದ್ದು ಈಗಾಗಲೇ…