ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ರೈತರನ್ನು ಋಣಮುಕ್ತ ರನ್ನಾಗಿಸಲು ಸಾಲ ಮನ್ನಾಗೆ ಕೇಂದ್ರ ಸರ್ಕಾರ ಶೇ.50ರಷ್ಟು ಸಹಾಯ ಧನ ಒದಗಿಸಬೇಕು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರಮೋದಿ ನೇತೃತ್ವದಲ್ಲಿ ನಡೆದಿರುವ ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳ ಸತತ ಬರ, ಬೆಳೆ ಹಾನಿ, ಮಳೆ ಕೊರತೆ ಮತ್ತಿತರ ಕಾರಣಗಳಿಂದ ರಾಜ್ಯದ 85 ಲಕ್ಷ ರೈತರು ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಸಾಲವನ್ನು ಬಾಕಿ ಉಳಿಸಿ ಕೊಂಡಿದ್ದಾರೆ. ಸಾಲ ಕಟ್ಟಲಾಗದ…