ಅರಸೀಕೆರೆ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನನ್ನ ಮೇಲೆ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಹಾಗೇನಾದರೂ ಅವರು ಸಾಕ್ಷಿ ಸಮೇತ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆದು, ತನ್ನೆಲ್ಲಾ ಆಸ್ತಿಯನ್ನು ಕೊಡಗು ಸಂತ್ರಸ್ತರಿಗೆ ನೀಡುವುದಾಗಿ ಸಕಲೇಶಪುರ ವಿಧಾನಸಭೆ ಪರಾಜಿತ ಅಭ್ಯರ್ಥಿ ನಾರ್ವೆ ಸೋಮಶೇಖರ್ @ ಜಿಮ್ ಸೋಮ ಸವಾಲು ಹಾಕಿದರು. ಪಟ್ಟಣದಲ್ಲಿ ನಡೆದ ಬಿಎಸ್ವೈ ಆಪ್ತ ಸಹಾಯಕ ಸಂತೋಷ್ ನಿಶ್ಚಿತಾರ್ಥದಲ್ಲಿ ಭಾಗವಹಿಸಿದ್ದ ನಾರ್ವೆ ಸೋಮಶೇಖರ್, ಸಿಎಂ ಮಾಡಿರುವ ಅಕ್ರಮ ಆಸ್ತಿ ಗಳಿಕೆ, ಶಾಸಕರ ಖರೀದಿ ಆರೋಪಗಳಿಗೆ ಪ್ರತಿಕ್ರಿಯಿಸಿದರು. ಸಿಎಂ…