ಮೈಸೂರು: ಮೈಸೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪ್ರತಿನಿಧಿಸುವ ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯ 23 ವಾರ್ಡ್ಗಳ ಪೈಕಿ ಕಾಂಗ್ರೆಸ್ 13 ಸ್ಥಾನ ಗಳನ್ನು ಪಡೆಯುವ ಮೂಲಕ ಈ ಕ್ಷೇತ್ರ ದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಇರುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಕಾಂಗ್ರೆಸ್ 13 ವಾರ್ಡ್ಗಳಲ್ಲಿ ಗೆಲುವು ಸಾಧಿಸಿದರೆ, 6 ವಾರ್ಡ್ಗಳಲ್ಲಿ ಜಾತ್ಯತೀತ ಜನತಾದಳ, 3ರಲ್ಲಿ ಬಿಜೆಪಿ ಹಾಗೂ ಒಂದರಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಗೆಲುವು ದಾಖಲಿಸಿದ ವಾರ್ಡ್ಗಳೆಂದರೆ, 8ನೇ ವಾರ್ಡ್ (ಬನ್ನಿ ಮಂಟಪ ಹುಡ್ಕೋ…
ಎನ್.ಆರ್.ಕ್ಷೇತ್ರ ವ್ಯಾಪ್ತಿಯ 23 ವಾರ್ಡ್ಗಳಲ್ಲಿ ವಿವಿಧ ಪಕ್ಷದ ಅಭ್ಯರ್ಥಿಗಳ ಬಿರುಸಿನ ಪ್ರಚಾರ
August 28, 2018ಮೈಸೂರು: ಮೈಸೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 23 ವಾರ್ಡ್ಗಳಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರ ಅಭ್ಯರ್ಥಿಗಳ ಪ್ರಚಾರ ಕಾಂiÀರ್i ಬಿರುಸುಗೊಂಡಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿಯ ಪ್ರಮುಖ ಹುರಿಯಾಳುಗಳು ಮನೆ ಮನೆಗೆ ಭೇಟಿ ನೀಡಿ ಮತಯಾಚನೆಯಲ್ಲಿ ತೊಡಗಿದ್ದು, ಮತದಾರರ ಗಮನ ಸೆಳೆಯಲು ಹರಸಾಹಸ ಪಡುತ್ತಿದ್ದಾರೆ. ಎಸ್ಡಿಪಿಐ, ಬಿಎಸ್ಪಿ ಅಭ್ಯರ್ಥಿಗಳು ಸಹ ತೀವ್ರ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಾಸಕ ತನ್ವೀರ್ಸೇಠ್, ಎಂಎಲ್ಸಿ ರಿಜ್ವಾನ್ ಹರ್ಷದ್ ಇನ್ನಿತರ ಮುಖಂಡರು ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ…
ಕಾಂಗ್ರೆಸ್ನವರಿಂದ ಕೋಮು ಸೌಹಾರ್ದತೆ ಕದಡುವ ಯತ್ನ: ಬಿ.ಪಿ.ಮಂಜುನಾಥ್
August 24, 2018ಮೈಸೂರು: ಪಾಲಿಕೆ ಚುನಾವಣೆಯಲ್ಲಿ ಎನ್ಆರ್ ಕ್ಷೇತ್ರದ ವಾರ್ಡ್ಗಳಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ನವರು ಕೋಮು ಸೌಹಾರ್ದತೆಕ್ಕೆ ಧಕ್ಕೆ ತರಲು ಮುಂದಾಗಿದ್ದು, ವಾರ್ಡ್ 16ರ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮೇಯರ್ ಆರೀಫ್ ಹುಸೇನ್ ಪ್ರಚಾರದ ವೇಳೆ ಕೋಮು ಸೌಹಾರ್ದತೆಯನ್ನು ಕದಡುವಂತಹ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಬಿ.ಪಿ.ಮಂಜುನಾಥ್ ಆರೋಪಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೀಫ್ ಹುಸೇನ್ ಅವರು ಪ್ರಚಾರದ ವೇಳೆ ಕೋಮು ಸಾಮರಸ್ಯ ಹಾಳು ಮಾಡುವಂತೆ ವರ್ತಿಸಿದ್ದಾರೆ. 16ನೇ…
ಎನ್.ಆರ್.ಕ್ಷೇತ್ರದಲ್ಲಿ 100 ಹಾಸಿಗೆ ಆಸ್ಪತ್ರೆ, ಸಂಪರ್ಕ ರಸ್ತೆ ನಿರ್ಮಾಣಕ್ಕೆ ಕ್ರಮ
June 24, 2018ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಶಾಸಕ ತನ್ವೀರ್ ಸೇಠ್ ಪ್ರಕಟ ನರ್ಮ್ ಮನೆ ನಿರ್ಮಾಣದ ಅವ್ಯವಹಾರ ಸಂಬಂಧ ತನಿಖೆಗೆ ಆಗ್ರಹ ಕಸ ನಿರ್ವಹಣೆಯಲ್ಲಿ ಕಾಣದ ಕೈಗಳ ಕೈವಾಡ ಶಂಕೆ ಮೈಸೂರು: ಮೈಸೂರಿನ ಎನ್.ಆರ್.ಕ್ಷೇತ್ರದ ಜನರ ಅನುಕೂಲಕ್ಕಾಗಿ 100 ಹಾಸಿಗೆಯ ಆಸ್ಪತ್ರೆ, ವಿವಿಧ ಬಡಾವಣೆಗಳಿಗೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ. ಮೈಸೂರಿನ ನಜರ್ಬಾದ್ನಲ್ಲಿರುವ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಶನಿವಾರ ಎನ್.ಆರ್.ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ…
ನಾನು ಸಿಎಂ ಆಗುವುದು ಮುಖ್ಯವಲ್ಲ, ಕಾಂಗ್ರೆಸ್ ನೀತಿ-ನಿಯಮ ಉಳಿವು ಮುಖ್ಯ ಎನ್.ಆರ್.ಕ್ಷೇತ್ರದ ಅಭ್ಯರ್ಥಿ ತನ್ವೀರ್ ಸೇಠ್ ಪರ ಮಲ್ಲಿಕಾರ್ಜುನ ಖರ್ಗೆ ಮತಯಾಚನೆ
May 7, 2018ಮೈಸೂರು: ಪ್ರಸ್ತುತ ನಾನು ಮುಖ್ಯ ಮಂತ್ರಿಯಾಗುವುದು ಮುಖ್ಯವಲ್ಲ. ಬದಲಾಗಿ ದೇಶದಲ್ಲಿ ಕಾಂಗ್ರೆಸ್ನ ನೀತಿ-ನಿಯಮಗಳು ಉಳಿಯುವುದು ಮುಖ್ಯ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟರು. ಎನ್.ಆರ್.ಕ್ಷೇತ್ರದ ವ್ಯಾಪ್ತಿಯ ಗಾಂಧಿನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತನ್ವೀರ್ಸೇಠ್ ಪರ ಮತಯಾಚನೆ ಮಾಡಿದ ನಂತರ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಕೆ.ಆರ್.ಕ್ಷೇತ್ರ ವ್ಯಾಪ್ತಿಯ ಅಶೋಕಪುರಂನಲ್ಲಿ ನಾನು ಚುನಾವಣಾ ಪ್ರಚಾರದಲ್ಲಿದ್ದಾಗ ಕೆಲ ನನ್ನ ಅಭಿಮಾನಿಗಳು ನೀವು ಮುಖ್ಯಮಂತ್ರಿಯಾಗಬೇಕು. ಬೇರೆ ಯಾರನ್ನೋ ಮುಖ್ಯಮಂತ್ರಿ ಮಾಡುವುದಾದರೆ, ಕಾಂಗ್ರೆಸ್ಗೆ ಮತ ಹಾಕುವುದಿಲ್ಲ ಎಂದು ಉದ್ವೇಗದಲ್ಲಿ ಮಾತನಾಡಿದ್ದಾರೆ. ಇದು ಅವರ ತಪ್ಪು…