ಮೈಸೂರು: ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಿರುವ ಎನ್.ಆರ್.ಠಾಣೆ ಪೊಲೀಸರು 8 ಲಕ್ಷ ರೂ. ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ವೈನಾಡಿನ ಮಾನಂದವಾಡಿ ನಿವಾಸಿಗಳಾದ ಸರ್ಫುದ್ದೀನ್(19) ಹಾಗೂ ವಿಷ್ಣು(19) ಬಂಧಿತರು. ಅವರಿಂದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳವು ಮಾಡಿದ್ದ ವಾಹನಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಖದೀಮರು ಸಿಕ್ಕಿ ಬಿದ್ದರು. ಮೈಸೂರಿನ ಮಂಡಿ ಮೊಹಲ್ಲಾ ಲಷ್ಕರ ಮೊಹಲ್ಲಾ ಹಾಗೂ ಸುತ್ತಮುತ್ತಲಲ್ಲಿ ಬೈಕ್ಗಳನ್ನು ಕಳವು ಮಾಡಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿತು….