ಹನಗೋಡು: ಯುವಜನರಲ್ಲಿ ನಾಯಕತ್ವ ಗುಣ ಬೆಳೆಯಲು ಎನ್ಎಸ್ಎಸ್ ಶಿಬಿರ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಕೊಳ್ಳುವಂತೆ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ತಿಳಿಸಿದರು. ಹನಗೋಡು ಹೋಬಳಿಯ ರಾಮೇನ ಹಳ್ಳಿಯಲ್ಲಿ ಹುಣಸೂರು ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಎನ್ಎಸ್ಎಸ್ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಂದ ಶ್ರಮದಾನ, ಸ್ವಚ್ಛತೆಯ ಅರಿವು, ಸ್ವಯಂ ರಕ್ತದಾನದ ಮಹತ್ವ, ಆರೋಗ್ಯದ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಅನ್ಯಾಯದ ವಿರುದ್ಧ ಹೋರಾಟದ ಮನೋ ಭಾವ ಕಡಿಮೆಯಾಗುತ್ತಿರುವುದರಿಂದ ಸಮಾಜದಲ್ಲಿ ಸಮಾಜಘಾತುಕ ಶಕ್ತಿಗಳು ಹೆಚ್ಚಾಗುತ್ತಿವೆ….