ಮೈಸೂರು: ನರ್ಮ್ ಮನೆಗಳ ಫಲಾನುಭವಿಗಳ ಆಯ್ಕೆ ಪಟ್ಟಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಏಕಲವ್ಯ ನಗ ರದ ನರ್ಮ್ ಮನೆ ವಂಚಿತರು ಅನಿರ್ದಿಷ್ಟಾ ವಧಿ ಪ್ರತಿಭಟನಾ ಧರಣಿ ಆರಂಭಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ ಪ್ರತಿ ಭಟನಾಕಾರರು ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಮೈಸೂರಿನ ವಿವಿಧೆಡೆ ನರ್ಮ್ ಯೋಜನೆ ಯಡಿ ನಿರ್ಮಿಸಿರುವ ವಸತಿ ಸಮುಚ್ಛಯ ಗಳಲ್ಲಿ ಮನೆ ಮಂಜೂರು ಮಾಡುವ ವೇಳೆ…