ಗ್ರೀನ್ ಕಾರಿಡಾರ್ ಮೂಲಕ ಅಂಗಾಂಗ ರವಾನೆ ಕಟ್ಟಡದ ಮೇಲಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯಿಂದ 6 ಜನರಿಗೆ ಜೀವದಾನ ಗಂಟೆಗೆ 127 ಕಿ.ಮೀ. ವೇಗದಲ್ಲಿ ಆಂಬುಲೆನ್ಸ್ನಲ್ಲಿ ಬೆಂಗಳೂರು ತಲುಪಿದ ಅಂಗಾಂಗ ಮೈಸೂರು: ಕಟ್ಟಡವೊಂದರಲ್ಲಿ ಕೆಲಸ ಮಾಡುವ ವೇಳೆ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರ ಅಂಗಾಂಗ ದಾನ ಮಾಡುವ ಮೂಲಕ ಅವರ ಪೋಷಕರು ಮಾನವೀಯತೆ ಮೆರೆದರೆ, ವೈದ್ಯರು ಮತ್ತು ಪೊಲೀಸರು ಕ್ಷಿಪ್ರ ಗತಿಯಲ್ಲಿ ಕಾರ್ಯಾಚರಣೆ ಮಾಡಿ ಬೇರ್ಪಡಿಸಿದ ಅಂಗಾಂಗಗಳನ್ನು ಗ್ರೀನ್ ಕಾರಿಡಾರ್ ಮೂಲಕ ಬೆಂಗಳೂರಿಗೆ ನಿಗದಿತ ಸಮಯಕ್ಕೂ ಮುನ್ನ…