ಮೈಸೂರು: ರೈತರು ಬೆಳೆದ ಸಾವಯವ ತರಕಾರಿ, ಹಣ್ಣುಗಳನ್ನು ನೇರವಾಗಿ ನಾಗರಿಕರಿಗೆ ತಲುಪಿಸಲು ಸ್ವದೇಶಿ ಜಾಗರಣ್ ಮಂಚ್ ಮತ್ತು ಜನಚೇತನ ಟ್ರಸ್ಟ್ ವತಿಯಿಂದ ಡಿ.9ರಂದು ಬೆಳಿಗ್ಗೆ 6ರಿಂದ ರಾತ್ರಿ 11ರವರೆಗೆ ಮೈಸೂರಿನ ಜೆ.ಪಿ.ನಗರ ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ ಸಾವಯವ ಹಾಗೂ ನೈಸರ್ಗಿಕ ಕೃಷಿಕರ ಸಂತೆ ನಡೆಯಲಿದೆ. ಸ್ವದೇಶಿ ಜಾಗರಣ್ ಮಂಚ್ನ ರಾಜ್ಯ ಸಂಯೋಜಕ ಎನ್.ಆರ್. ಮಂಜುನಾಥ್ ಅವರು ಶುಕ್ರವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ವಿಷಮುಕ್ತ ಆಹಾರ ಸೇವನೆಯ ಲಾಭಗಳ ಕುರಿತು ಜನ…
ಸಾವಯವ ಕೃಷಿ ಉತ್ಪನ್ನಗಳ ‘ರೈತ ಸಂತೆ’ಗೆ ಉತ್ತಮ ಪ್ರತಿಕ್ರಿಯೆ
November 11, 2018ಮೈಸೂರು: ಸಾವಯವ ಕೃಷಿಗೆ ಪ್ರತ್ಯೇಕ ಮಾರುಕಟ್ಟೆ ಒದಗಿಸುವ ಸಲುವಾಗಿ ನಿಸರ್ಗ ಟ್ರಸ್ಟ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ರೈತ ಸಂತೆಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮೈಸೂರಿನ ಕಾಮಾಕ್ಷಿ ಆಸ್ಪತ್ರೆ ರಸ್ತೆಯ ಹ್ಯಾಪಿಮ್ಯಾನ್ ಉದ್ಯಾನವನದ ಬಳಿ ಟ್ರಸ್ಟ್ನ ಮಾರಾಟ ಕೇಂದ್ರದ ಎದುರು ಏರ್ಪಡಿಸಿದ್ದ ರೈತ ಸಂತೆಯಲ್ಲಿ ಗ್ರಾಹಕರು ನೇರವಾಗಿ ರೈತರಿಂದ ಧಾನ್ಯ ಹಾಗೂ ತರಕಾರಿ ಸೇರಿದಂತೆ ಸಿರಿಧಾನ್ಯಗಳಿಂದ ತಯಾರಾದ ತಿಂಡಿ ತಿನಿಸುಗಳನ್ನು ಖರೀದಿಸಿದರು. ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ `ನೈಸರ್ಗಿಕ ಸಾವಯವ ರೈತ ಗ್ರಾಹಕ ಒಕ್ಕೂಟ’ದ `ನಿಸರ್ಗ…
ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಸಲಹೆ
June 26, 2018ಸಂತೇಮರಹಳ್ಳಿ: ‘ರೈತರು ರಾಸಾ ಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಿ ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಪಿ.ಸದಾಶಿವ ಮೂರ್ತಿ ಸಲಹೆ ನೀಡಿದರು. ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ನಡೆದ ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶ ದಿಂದ ಸರ್ಕಾರ ಫಸಲ ಭೀಮ ಯೋಜನೆ ಜಾರಿಗೊಳಿಸಿದೆ. ಇದನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು. ಬೆಳೆಗಳಿಗೆ ಅನುಗುಣವಾಗಿ ರೈತರ ಖಾತೆಗಳಿಗೆ ವಿಮಾ ಹಣ…