ಮೈಸೂರು: ನಿಗದಿಗಿಂತ ಹೆಚ್ಚು ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ವಿರುದ್ಧ ತಪಾಸಣೆ ಮಾಡುತ್ತಿರುವ ಸಂಚಾರ ಪೊಲೀಸರ ಕ್ರಮ ಖಂಡಿಸಿ 500ಕ್ಕೂ ಹೆಚ್ಚು ಚಾಲಕರು ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿಯ ಓವಲ್ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು. ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅಪಘಾತಗಳು ಹಾಗೂ ಸಾವು-ನೋವುಗಳನ್ನು ನಿಯಂತ್ರಿಸಲು ಸಂಚಾರ ಪೊಲೀಸರು ಕಳೆದ ಒಂದು ವಾರ ದಿಂದ ಮೈಸೂರು ನಗರದಾದ್ಯಂತ ಕಾರ್ಯಾ ಚರಣೆ ನಡೆಸಿ ಸಾಮಥ್ರ್ಯಕ್ಕಿಂತ ಹೆಚ್ಚಿನ ಸಂಖ್ಯೆ ಯಲ್ಲಿ ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ಆಟೋ ಹಾಗೂ ಮಾರುತಿ ಓಮ್ನಿ…