ಮೈಸೂರು: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಅಸ್ತಿತ್ವಕ್ಕಾಗಿ ರಕ್ಷಣಾ ವ್ಯವಸ್ಥೆಯ ಇತಿಹಾಸದಲ್ಲಿ ರಫೆಲ್ನಂತಹ ದೊಡ್ಡ ಹಗರಣ ನಡೆಸುವ ಮೂಲಕ ಭದ್ರತಾ ವ್ಯವಸ್ಥೆಯನ್ನು ಸಡಿಲಗೊಳಿಸುವ ಹುನ್ನಾರ ಮಾಡಿದೆ ಎಂದು ಕೇಂದ್ರದ ಮಾಜಿ ಸಚಿವ ಪಲ್ಲಂ ರಾಜು ಆರೋಪಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಒಪ್ಪಂದವನ್ನು ಗಾಳಿಗೆ ತೂರಿ ಇದೀಗ 40 ಸಾವಿರ ಕೋಟಿ ರೂ.ಗಳ ಹಗರಣ ನಡೆಸುವುದರೊಂದಿಗೆ ಗೌಪ್ಯವಾಗಿಡಬೇಕಾದ ಭದ್ರತಾ ವ್ಯವಸ್ಥೆಯನ್ನು ಖಾಸಗಿ ಸಂಸ್ಥೆಗಳಿಗೆ…