ಮೈಸೂರು: ಬೈಕುಗಳಲ್ಲಿ ಬಂದು ದಾಳಿ ನಡೆಸಿದ ದುಷ್ಕರ್ಮಿಗಳ ಗುಂಪು, ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದರೋಡೆಗೆ ಯತ್ನ ನಡೆಸಿರುವ ಘಟನೆ ಮೈಸೂರು-ಬೆಂಗಳೂರು ಹೆದ್ದಾರಿಯ ಸಿದ್ದಲಿಂಗಪುರ ಬಳಿ ಇಂದು ಮುಂಜಾನೆ ಸಂಭವಿಸಿದೆ. ಸಿದ್ಧಲಿಂಗಪುರ ಬಳಿಯ ಶಕ್ತಿ ಪೆಟ್ರೋಲಿಯಂ ಸರ್ವೀಸ್ ಸ್ಟೇಷನ್ನಲ್ಲಿ ಮುಂಜಾನೆ 4.30 ಗಂಟೆ ವೇಳೆಗೆ ಈ ಕೃತ್ಯ ನಡೆದಿದೆ. ಪೆಟ್ರೋಲ್ ಬಂಕ್ನಲ್ಲಿ ಮಲಗಿದ್ದ ಐವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ 6 ಮಂದಿ ಅಪರಿಚಿತರು, ಮಾರಕಾಸ್ತ್ರಗಳನ್ನು ತೋರಿಸಿ ಹಣಕೊಡುವಂತೆ ಧಮ್ಕಿ ಹಾಕಿದ್ದಾರೆ. ಈ ಶಬ್ದದಿಂದ…