ಮೈಸೂರು: ಸ್ವಚ್ಛತೆಗೆ ಹೆಸರುವಾಸಿಯಾಗಿರುವ ಸಾಂಸ್ಕøತಿಕ ನಗರಿ ಮೈಸೂರನ್ನು ಪ್ಲಾಸ್ಟಿಕ್ ಮುಕ್ತಗೊಳಿಸಿ ಎಂದು ರಾಜಮಾತೆ ಶ್ರೀಮತಿ ಪ್ರಮೋದಾದೇವಿ ಒಡೆಯರ್ ಜನತೆಯಲ್ಲಿ ಮನವಿ ಮಾಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ವತಿಯಿಂದ ದೇವರಾಜ ಮಾರುಕಟ್ಟೆಯ ಚಿಕ್ಕಗಡಿಯಾರದ ಬಳಿ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣಾ 4ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಮಾಡದಂತೆ ತಡೆಯಬೇಕು. ಪ್ಲಾಸ್ಟಿಕ್ ತಿಂದು ದನ-ಕರುಗಳು ಅನಾರೋಗ್ಯಕ್ಕೊಳಗಾಗುವುದಲ್ಲದೆ ಪರಿಸರ ಹಾನಿಯಾಗಲಿದೆ ಎಂದರು. ಈಗಾಗಲೇ ರಾಷ್ಟ್ರಮಟ್ಟದಲ್ಲಿ ಸ್ವಚ್ಛತೆಗೆ ಪ್ರಶಸ್ತಿ ಬಂದಿರುವುದರಿಂದ ಈ ಬಾರಿಯೂ ಸ್ವಚ್ಛತೆ ಕಾಪಾಡುವ ಮೂಲಕ…