ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯುವುದರೊಂದಿಗೆ ಅರಮನೆಯಲ್ಲಿ ಖಾಸಗಿ ದರ್ಬಾರ್ ಸಹ ಬುಧವಾರದಿಂದ ಆರಂಭವಾಯಿತು. ನವರಾತ್ರಿಯ ಮೊದಲ ದಿನವಾದ ಇಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರತ್ನ ಖಚಿತ ಸಿಂಹಾಸನಾರೂಢರಾಗಿ ಸಂಪ್ರದಾಯದಂತೆ ಕೆಲ ವಿಧಿ-ವಿಧಾನಗಳನ್ನು ಪೂರೈಸಿ, ಗಮನ ಸೆಳೆದರು. ಅರಮನೆಯ ದರ್ಬಾರ್ ಹಾಲ್ನಲ್ಲಿ ಇಂದು ಬೆಳಗಿನಿಂದ ಮಧ್ಯಾಹ್ನ ದವರೆಗೆ ವಿವಿಧ ಪೂಜಾ ಕೈಂಕರ್ಯ ಗಳಲ್ಲಿ ರಾಜ ವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾಕುಮಾರಿ ಒಡೆಯರ್ ಪಾಲ್ಗೊಂಡು, ಖಾಸಗಿ ದರ್ಬಾರ್ಗೆ…
ಮೈಸೂರು
ಖಾಸಗಿ ದರ್ಬಾರ್ಗೆ ಭಾರೀ ಭದ್ರತೆ ನಡುವೆ ಶಾಸ್ತ್ರೋಕ್ತ ಸಿಂಹಾಸನ ಜೋಡಣೆ
October 5, 2018ಮೈಸೂರು: ನಾಡ ಹಬ್ಬ ದಸರಾ ಮಹೋತ್ಸವದ ಪ್ರಮುಖ ಆಚರಣೆ ಖಾಸಗಿ ದರ್ಬಾರ್ ಅ.10ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಗುರುವಾರ ಬಿಗಿ ಭದ್ರತೆಯಲ್ಲಿ ಅರಮನೆ ನೆಲಮಾಳಿಗೆಯ ಭದ್ರತಾ ಕೊಠಡಿಯಿಂದ ರತ್ನ ಖಚಿತ ಸಿಂಹಾಸನವನ್ನು ದರ್ಬಾರ್ ಹಾಲ್ಗೆ ತಂದು ಜೋಡಿಸಲಾಯಿತು. ಯದುವಂಶ ಪರಂಪರೆಗಳಲ್ಲಿ ಖಾಸಗಿ ದರ್ಬಾರ್ ಒಂದಾಗಿದ್ದು, ನವರಾತ್ರಿಯ ವೇಳೆ ಹಲವು ಕಟ್ಟುಪಾಡುಗಳೊಂದಿಗೆ ಒಂಭತ್ತು ದಿನವೂ ದಿನಕ್ಕೆ ಎರಡು ಬಾರಿ ಖಾಸಗಿ ದರ್ಬಾರ್ ನಡೆಯಲಿದೆ. ಶತಮಾನದ ಇತಿಹಾಸವಿರುವ ಚಿನ್ನದ ಸಿಂಹಾಸನದ ಮೇಲೆ ರಾಜರು ಆಸೀನರಾಗಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳನ್ನು ಪೂರೈಸ ಲಿದ್ದಾರೆ….