ಮೈಸೂರು: ಶಾಲಾ ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಕಾಳಜಿ ವಹಿಸಿರುವ ಮೈಸೂರು ಜಿಲ್ಲಾಡಳಿತವು, ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ. ಪ್ರಾದೇಶಿಕ ಸಾರಿಗೆ ಜಂಟಿ ಆಯುಕ್ತರ ಕಚೇರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಸಂಯುಕ್ತಾ ಶ್ರಯದಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ಖಾಸಗಿ ಶಾಲಾ-ಕಾಲೇಜುಗಳ ವಾಹನಗಳ ತಪಾಸಣೆ ಮತ್ತು ಚಾಲಕರಿಗೆ ಅರಿವಿನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸದ್ವಿದ್ಯಾ, ವಿದ್ಯಾವರ್ಧಕ, ಎಸ್ವಿಐ, ವಿಶ್ವ ಪ್ರಜ್ಞ ಸಂಯುಕ್ತ ಪಿಯು ಕಾಲೇಜು, ಮೈಕಾ, ಅಮೃತ ವಿದ್ಯಾಲಯ,…