ಮೈಸೂರು: ಗೊಂದಲ ಮತ್ತು ಅವ್ಯವಸ್ಥೆಯ ಗೂಡಾ ಗಿರುವ ಇಂದಿನ ನಮ್ಮ ಶಿಕ್ಷಣ ವ್ಯವಸ್ಥೆಯ ನಡುವೆ ಭವ್ಯ ಭಾರತದ ಭವಿಷ್ಯದ ಮಕ್ಕಳನ್ನು ಉತ್ತಮ ಶಿಕ್ಷಣವಂತರಾಗಿ ಬೆಳೆಸುವುದಾದರು ಹೇಗೆ ಎಂಬುದು ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಬೆಂಗಳೂರಿನ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸಡ್ ರೀಸರ್ಚ್ನ ಗೌರವ ಅಧ್ಯಕ್ಷ, ಭಾರತ ರತ್ನ ಪ್ರೊ.ಸಿ.ಎನ್.ಆರ್. ರಾವ್ ಇಂದಿಲ್ಲಿ ಆತಂಕ ವ್ಯಕ್ತಪಡಿಸಿದರು. ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆಯ 56ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಸಂಸ್ಥೆಯ ಆವರಣದಲ್ಲಿ ಅವರು ಸರ್ದಾರ್ ಫಣಿಕ್ಕರ್ ಸ್ಮಾರಕ ಉಪನ್ಯಾಸ…