ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ 12 ವಾರ್ಡ್ಗಳಲ್ಲಿ ಸ್ಪರ್ಧೆ ಮಾಡಿದ್ದು, 7ರಿಂದ 8 ವಾರ್ಡ್ಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪ್ರೊ.ಹರಿರಾಂ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆಗೆ ಉತ್ತಮ ಕಾರ್ಯನಿರ್ವಹಣೆ ನೀಡುವ ಹಾಗೂ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವ ಉದ್ದೇಶದೊಂದಿಗೆ ಇದೇ ಮೊದಲ ಬಾರಿಗೆ ಬಿಎಸ್ಪಿ ಪಾಲಿಕೆ ಚುನಾವಣೆಯಲ್ಲಿ 12 ವಾರ್ಡ್ಗಳಲ್ಲಿ ಸ್ಪರ್ಧೆ ಮಾಡಿದೆ. ಟಿಕೆಟ್ ಹಂಚಿಕೆಯಲ್ಲಿ…
ಚಾಮರಾಜನಗರ
ರಾಜ್ಯದಲ್ಲಿ ಪಕ್ಷ ಬಲಪಡಿಸಲು ಶ್ರಮಿಸುತ್ತೇನೆ: ಹರಿರಾಮ್
July 3, 2018ಚಾಮರಾಜನಗರ: ‘ರಾಜ್ಯದಲ್ಲಿ ಬಹುಜನ ಸಮಾಜ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಶ್ರಮಿಸಲಾಗುವುದು’ ಎಂದು ಪಕ್ಷದ ನೂತನ ರಾಜ್ಯ ಘಟಕದ ಅಧ್ಯಕ್ಷ ಪ್ರೊ.ಹರಿರಾಮ್ ಹೇಳಿದರು. ನಗರದ ಕೆ.ಸಿ.ರಂಗಯ್ಯ ಹಾಸ್ಟೆಲ್ನ ಪಕ್ಕದಲ್ಲಿರುವ ಸಭಾಂಗಣ ದಲ್ಲಿ ಸೋಮವಾರ ನಡೆದ ಬಹುಜನ ಸಮಾಜ ಪಕ್ಷದ ಜಿಲ್ಲಾ ಸಮಿತಿ ಸಭೆಯಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು. 2017ರ ವಿಧಾನಸಭಾ ಚುನಾವಣೆಯ ನಂತರ ಪಕ್ಷಕ್ಕೆ ಹೊಸ ಉತ್ಸಾಹ, ಹುಮ್ಮಸ್ಸು ಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಿದೆ. ಇದಕ್ಕೆ ಜೆಡಿಎಸ್, ಬಿಎಸ್ಪಿ ಮೈತ್ರಿಕಾರಣ ಎಂದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ…