ಮೈಸೂರು: ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ಸಿವಿಲ್ ಸೇವೆಗಳಲ್ಲಿರುವ ನೌಕರರಿಗೆ ತತ್ಪರಿಣಾಮದ ಜೇಷ್ಠತೆಯ ವಿಸ್ತರಿಸುವ 2017ರ ಕಾಯ್ದೆಯನ್ನು ವಾರದೊಳಗೆ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವಂತೆ ಮಾಜಿ ಮೇಯರ್ ಪುರುಷೋತ್ತಮ್ ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಕೆ.ಪವಿತ್ರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ತಪ್ಪಾಗಿ ಅರ್ಥೈಸಿಕೊಂಡು ಸುಮಾರು 50 ಸಾವಿರ ಪರಿಶಿಷ್ಟ ಜಾತಿ ಮತ್ತು ವರ್ಗದವರ ಹಿಂಬಡ್ತಿಗೆ ಕಾರಣರಾದ ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಉಪ ಕಾರ್ಯದರ್ಶಿ, ಅಧೀನ…