ಮೈಸೂರು: ಮೈಸೂರು ಜಿಲ್ಲಾ ಉಪ್ಪಾರ ನೌಕರರು ಹಾಗೂ ವೃತ್ತಿಪರರ ಸಂಘದ ಆಶ್ರಯದಲ್ಲಿ ಸೆ.23ರಂದು ಬೆಳಿಗ್ಗೆ 10.30 ಗಂಟೆಗೆ ಸಚಿವ ಸಿ.ಪುಟ್ಟರಂಗಶೆಟ್ಟರಿಗೆ ಸನ್ಮಾನ, ಸಾಧಕರು, ನಿವೃತ್ತ ನೌಕರರಿಗೆ ಸನ್ಮಾನ, ಎಸ್ಎಸ್ಎಲ್ಸಿ, ಪಿಯುಸಿಯ 250 ಪ್ರತಿಭಾವಂತರಿಗೆ ಗೌರವ ಸರ್ಮರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಘದ ಸಲಹೆಗಾರ ಕೆ.ಸೋಮಶೇಖರ್ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಮೈಸೂರಿನ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಚಿತ್ರದುರ್ಗ ಜಿಲ್ಲೆಯ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಮಳವಳ್ಳಿ ತಾಲೂಕಿನ ಅಯ್ಯನಸರಗೂರು…