ಮೈಸೂರು: ವಿದ್ಯಾರ್ಥಿಗಳು ತಮ್ಮ ನಿಶ್ಚಿತ ಯಶಸ್ಸಿಗೆ ಸಮಯದ ಸರಿಯಾದ ಬಳಕೆ ಅವಶ್ಯವಾದುದು ಎಂದು ಜಿಲ್ಲಾ ಯೋಜನಾ ನಿರ್ದೇಶಕ ಆರ್. ಲೋಕನಾಥ್ ಸಲಹೆ ನೀಡಿದರು. ನಗರದ ಲಕ್ಷ್ಮೀಪುರಂ ಸರ್ಕಾರಿ ಪ್ರೌಡಶಾಲೆ ಮತ್ತು ಕಾಲೇಜು ಕೊಠಡಿಯಲ್ಲಿ ಜ್ಞಾನಬುತ್ತಿ ಸಾಹಿತ್ಯ ಸಂಸ್ಕೃತಿ ಸಂಸ್ಥೆ ವತಿಯಿಂದ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪಠ್ಯಕ್ರಮಕ್ಕೆ ಯಾವುದೇ ನಿಯಮಿತಿ ಇರುವುದಿಲ್ಲ. ಆದ್ದರಿಂದ ವಿದ್ಯಾರ್ಥಿ ಗಳು ಇಂದು ಕಷ್ಟ ಪಟ್ಟರೆ ಮುಂದಿನ ದಿನಗಳಲ್ಲಿ ಸಂತೋಷದ ಜೀವನವನ್ನು ನಡೆಸಬಹುದು. ಯಾರು ಯಾರನ್ನು ಕಾಪಿ ಮಾಡಬೇಡಿ ಪ್ರತಿ…