ಬೆಂಗಳೂರು: ವಿವಿಧ ತಾಂತ್ರಿಕ ಕಾರಣಗಳಿಗಾಗಿ ಸೌಲಭ್ಯ ವಂಚಿತ 69,000 ಫಲಾನುಭವಿಗಳಿಗೆ ರಾಜೀವ್ಗಾಂಧಿ ವಸತಿ ಯೋಜನೆಯಡಿ ಮತ್ತೊಮ್ಮೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತಿದೆ ಎಂದು ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಇಂದಿಲ್ಲಿ ತಿಳಿಸಿದರು. ರಾಜೀವ್ಗಾಂಧಿ ವಸತಿ ನಿಗಮದ ಸ್ಪಂದನಾ ಸಹಾಯವಾಣಿ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಂಜೂರಾಗಿದ್ದ ಮನೆಗಳ ಪೈಕಿ ಕೆಲವಕ್ಕೆ ಮೊದಲ ಕಂತಿನ ಅನುದಾನ ಬಿಡುಗಡೆಯಾಗಿತ್ತು. ಕೆಲವರು ಮನೆ ನಿರ್ಮಾಣಕ್ಕೆ ತಳಪಾಯ ಹಾಕಿದ ನಂತರ ವಿವಿಧ ತಾಂತ್ರಿಕ ಕಾರಣಗಳಿಂದ ಮಂಜೂರಾಗಿದ್ದ ಮನೆಗಳು…