ಮೈಸೂರು: ನಿಯಮ ಉಲ್ಲಂಘಿಸಿ ನಿರ್ಮಿಸುತ್ತಿದ್ದ ಕಟ್ಟಡ ನೆಲಸಮಗೊಳಿಸಲು ಸಕಲ ಸಲಕರಣೆಗಳು, ಗ್ಯಾಂಗ್ಮನ್ಗಳೊಂದಿಗೆ ವೀರಾವೇಶದಿಂದ ತೆರಳಿದ್ದ ಮುಡಾ ಮತ್ತು ಪಾಲಿಕೆ ಅಧಿಕಾರಿಗಳು, ಮಾಲೀಕ ಛಾವಣಿ ಏರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಒಡ್ಡಿದ ಕಾರಣಕ್ಕೆ ಬಂದ ದಾರಿಗೆ ಸುಂಕವಿಲ್ಲದಂತೆ ಹಿಂದಿರುಗಿದ ಪ್ರಸಂಗ ಮೈಸೂರಿನ ರಾಜೀವ್ನಗರ 2ನೇ ಹಂತದ ದೇವನೂರು ಕೆರೆ ಸಮೀಪ ಮಂಗಳವಾರ ಬೆಳಿಗ್ಗೆ ನಡೆಯಿತು. ಪೂರ್ವ ಯೋಜನೆ, ಸರಿಯಾದ ಸಿದ್ಧತೆ, ಭದ್ರತಾ ವ್ಯವಸ್ಥೆ ಮಾಡಿಕೊಳ್ಳದೇ ಕಟ್ಟಡ ನೆಲಸಮ ಮಾಡಲು ಹೋದ ಅಧಿಕಾರಿಗಳು, ಮಾಲೀಕ ಸುಮಾರು 20 ಅಡಿ ಎತ್ತರದ…