ಬೆಂಗಳೂರು: ರಾಜ್ಯ ಸರ್ಕಾರವು 2018ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದ್ದು, ಮೈಸೂರಿನ ಸಾಹಿತಿ ಚ.ಸರ್ವಮಂಗಳಾ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎಲ್.ದತ್ತು, ಚಿತ್ರನಟ ಜೈ ಜಗದೀಶ್, ಮಾಜಿ ಕೇಂದ್ರ ಸಚಿವೆ ಮಾರ್ಗರೇಟ್ ಆಳ್ವಾ ಸೇರಿದಂತೆ 63 ಗಣ್ಯರಿಗೆ ನ.30ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಮೈಸೂರಿನಿಂದ ಸಾಹಿತ್ಯ ಕ್ಷೇತ್ರದಲ್ಲಿ ಚ. ಸರ್ವ ಮಂಗಳಾ, ಚಲನಚಿತ್ರ ಕ್ಷೇತ್ರದಲ್ಲಿ ನಿರ್ದೇಶಕ ಭಾರ್ಗವ, ರಾಜನ್, ಶಿಕ್ಷಣ ಕ್ಷೇತ್ರದಲ್ಲಿ ಗೀತಾ ರಾಮಾನುಜಂ, ಚಾಮರಾಜನಗರ ಜಿಲ್ಲೆಯ ರಾಮ ಸಮುದ್ರದ ಚನ್ನಮಲ್ಲೇಗೌಡರಿಗೆ…