ರಾಮನಾಥಪುರ: ಜೀವ ನದಿ ಕಾವೇರಿಯು 3ನೇ ದಿನವೂ ಅಪಾಯದ ಮಟ್ಟ ಮೀರಿ ಹರಿಯು ತ್ತಿರುವ ಪರಿಣಾಮ ಪ್ರವಾಹ ಸೃಷ್ಟಿಯಾಗಿದೆ. ಪಟ್ಟಣ ಸೇರಿದಂತೆ ನದಿ ಪಾತ್ರದ ಗ್ರಾಮಗಳು ಜಲಾ ವೃತವಾಗಿದ್ದು, ನೀರಿನ ರಭಸಕ್ಕೆ ಮನೆಗಳು ಕುಸಿದಿವೆ. ಜಮೀನುಗಳಲ್ಲಿ ನೀರು ನುಗ್ಗಿ ಪ್ರಮುಖ ಬೆಳೆ ಭತ್ತ ಸೇರಿದಂತೆ ಇನ್ನಿತರೆ ಫಸಲು ನಾಶವಾಗಿದೆ. ಶಾಸಕ ಎ.ಟಿ.ರಾಮಸ್ವಾಮಿ ನೇತೃತ್ವದಲ್ಲಿ ಸ್ಥಳಾಂ ತರ ಕಾರ್ಯ ಭರದಿಂದ ಸಾಗಿದೆ. ತೆಪ್ಪಗಳ ಮೂಲಕ ಸ್ಥಳಾಂತರ: ಪಟ್ಟಣ ಶ್ರೀ ರಾಮೇಶ್ವರಸ್ವಾಮಿ ದೇವಸ್ಥಾನದ ರಸ್ತೆ, ಐ.ಬಿ ಸರ್ಕಲ್, ಸೇರಿದಂತೆ ವಿವಿಧೆಡೆಯ…
ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳ: ಅರಕಲಗೂಡು, ರಾಮನಾಥಪುರ ವಿವಿಧೆಡೆ ಜಲಾವೃತ
August 17, 2018ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಸಿ, ಶಾಸಕರ ಭೇಟಿ ಸುರಕ್ಷಿತ ಸ್ಥಳಗಳಿಗೆ ಜನರನ್ನು ರವಾನಿಸಲು ಸೂಚನೆ 4 ಗಂಜಿ ಕೇಂದ್ರ ತೆರೆಯುವಂತೆ ಡಿಸಿ ಸಲಹೆ ಹಾಸನ: – ನಿರಂತರ ಮಳೆ ಹಾಗೂ ಕಾವೇರಿ ನದಿಯಲ್ಲಿ ಹೆಚ್ಚಿದ ನೀರಿನ ಪ್ರಮಾಣದಿಂದ ಅರಕಲಗೂಡು, ರಾಮನಾಥಪುರ ವ್ಯಾಪ್ತಿಯ ವಿವಿಧೆಡೆ ಉಂಟಾಗಿರುವ ಪ್ರವಾಹ ಪೀಡಿತ ಪ್ರದೇಶಗಳಿಗೆ ಗುರುವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಶಾಸಕ ಎ.ಟಿ.ರಾಮಸ್ವಾಮಿ ಅವರು, ಸಕಲೇಶಪುರ ಉಪ ವಿಭಾಗಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು….
ಸರ್ಕಾರದ ಯೋಜನೆಗಳು ಅರ್ಹರಿಗೆ ದೊರಕಲಿ
August 9, 2018ರಾಮನಾಥಪುರ: ಸರ್ಕಾರದ ಜನಪರ ಯೋಜನೆಗಳು ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ ದೊರಕಲು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಎ.ಟಿ.ರಾಮಸ್ವಾಮಿ ತಿಳಿಸಿದರು. ಹೋಬಳಿಯ ಲಕ್ಕೂರು ಗ್ರಾಪಂ ಆವರಣದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿ, ಸ್ಥಳೀಯ ಜನಪ್ರತಿನಿಧಿಗಳು ಸ್ಥಳೀಯ ಹಿರಿಯರ ವೃದ್ಧಾಪ್ಯವೇತನ ಮತ್ತು ಸಾರ್ವಜನಿಕರ ಕೆಲಸಗಳಿಗೆ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಗ್ರಾಪಂ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ಇದ್ದು, ಜನರ ಸಮಸ್ಯೆಗಳಿಗೆ ಸ್ವಂದಿಸಬೇಕು…
ಸರ್ಕಾರಿ ಸವಲತ್ತು ಜನತೆಗೆ ತಲುಪಲಿ
August 8, 2018ರಾಮನಾಥಪುರ: ಸರ್ಕಾರದ ಸವಲತ್ತು ಸುಲಭವಾಗಿ ಜನರಿಗೆ ತಲುಪು ವಂತಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿ ಗಳು ಕೆಲಸ ಮಾಡಬೇಕು ಎಂದು ಶಾಸಕ ಡಾ. ಎ.ಟಿ.ರಾಮಸ್ವಾಮಿ ಹೇಳಿದರು. ಹೋಬಳಿ ಗಂಗೂರು ಗ್ರಾಪಂ ಆವರಣದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಶುದ್ಧ ಕುಡಿಯುವ ನೀರಿನ ಪೂರೈಕೆ, ವಿದ್ಯುತ್ ಸಮಸ್ಯೆ, ನಿವೇಶನ, ಶೌಚಾಲಯದ ವ್ಯವಸ್ಥೆ, ರಸ್ತೆ, ಚರಂಡಿ ವ್ಯವಸ್ಥೆ ಸಂಬಂಧಿಸಿದಂತೆ 150ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಅರ್ಜಿ ಗಳನ್ನು ಪರಿಶೀಲಿಸಿ, ಶೀಘ್ರವೇ ಕ್ರಮ ಕೈಗೊಳ್ಳ ಲಾಗುವುದು….
ನಾಲೆಗಳಿಗೆ ನೀರು; ವಿವಿಧೆಡೆ ಭತ್ತದ ಕೃಷಿ ಚುರುಕು
August 6, 2018ರಾಮನಾಥಪುರ: ಸತತ ಮಳೆಯಿಂದ ಹೇಮಾವತಿ, ಹಾರಂಗಿ ಜಲಾಶಯ ಭರ್ತಿಯಾಗಿದ್ದು, ನಾಲೆಗಳಿಗೆ ನೀರು ಬಿಟ್ಟಿರುವುದರಿಂದ ಅರಕಲಗೂಡಿನ ವಿವಿಧ ಹೋಬಳಿಗಳ ವ್ಯಾಪ್ತಿಗಳಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ. ರೈತರ ಭತ್ತ ಬೆಳೆಯುವ ಆಸೆ ಚಿಗುರೊಡೆದಿದೆ. ನಾಲೆಗಳಿಗೆ ಹರಿದ ನೀರು: ಕೊಡಗು ಸೇರಿದಂತೆ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕೊಡಗಿನ ಹಾರಂಗಿ ಮತ್ತು ಗೊರೂರಿನ ಹೇಮಾವತಿ ಜಲಾಶಯ ಭರ್ತಿಯಾಗಿದ್ದು, ಕಟ್ಟೇಪುರ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ನೀರು ಬಿಡಲಾಗಿದೆ. ಹೀಗಾಗಲೇ ಕೆಲವು ಕೆರೆ-ಕಟ್ಟೆಗಳು ತುಂಬಿವೆ. ಇದ ರಿಂದ ತಾಲೂಕಿನ ರಾಮನಾಥಪುರ ಕೊಣನೂರು, ದೊಡ್ಡಮಗ್ಗೆ…
ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿ
August 6, 2018ರಾಮನಾಥಪುರ: ಸರ್ಕಾರದ ಸವಲತ್ತುಗಳನ್ನು ಸುಲಭವಾಗಿ ಜನರ ಬಳಿಗೆ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಶಾಸಕ ಡಾ.ಎ.ಟಿ.ರಾಮಸ್ವಾಮಿ ತಿಳಿಸಿದರು. ರಾಮನಾಥಪುರ ಹೋಬಳಿ ಕೇರಳಾಪುರದ ಗ್ರಾಪಂ ಆವರಣದಲ್ಲಿ ನಡೆದ ಜನ ಸಂರ್ಪಕ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಜನರನ್ನು ಕಚೇರಿಗಳಿಗೆ ಅಲೆಸಬಾರದು ಎಂಬ ದೃಷ್ಟಿಯಿಂದ ಜನ ಸಂಪರ್ಕ ಸಭೆ ನಡೆಸಲಾಗುತ್ತಿದೆ. ನೀರಾವರಿ, ಕಂದಾಯ, ವಿದ್ಯುತ್, ಶಿಕ್ಷಣ, ಕೃಷಿ ಸಂಬಂಧಿಸಿದ ಇಲಾಖೆಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರಿಂದ 150ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಇವುಗಳನ್ನು…
ಜಡಿ ಮಳೆಗೆ ತಲೆಕೆಳಕಾದ ರೈತರ ಲೆಕ್ಕಾಚಾರ
July 18, 2018ರಾಮನಾಥಪುರ: ಈ ಬಾರಿಯ ಮುಂಗಾರಿನಿಂದ ವಾಣಿಜ್ಯ ಬೆಳೆ ಬೆಳೆದು, ಉತ್ತಮ ಬೆಲೆ ಪಡೆಯುವ ನಿರೀಕ್ಷೆಯಲ್ಲಿದ್ದ ರೈತರ ಲೆಕ್ಕಾಚಾರ ತಿಂಗಳಿಂದ ಸುರಿಯುತ್ತಿ ರುವ ಜಡಿ ಮಳೆಯಿಂದ ತಲೆಕೆಳಕಾಗಿದೆ. ಇಲ್ಲಿಯ ತಂಬಾಕು ಹರಾಜು ಮಾರು ಕಟ್ಟೆಯ ವ್ಯಾಪ್ತಿಯಲ್ಲಿ ಹಲವು ವರ್ಷಗಳ ನಂತರ ವಾಡಿಕೆಗಿಂತ ಹೆಚ್ಚಿನ ಮಳೆಯಾಗು ತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿರುವು ದರ ಜೊತೆಗೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಾದ ಹೊಗೆಸೊಪ್ಪು, ಶುಂಠಿ, ಅಲೂಗೆಡ್ಡೆ, ನೆಲಗಡಲೆ, ಹಲಸಂದೆ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದೆ. ಜೂನ್ ಕೊನೆಯವಾರದಿಂದ ಸುರಿ ಯುತ್ತಿರುವ ಅತಿಯಾದ ಜಡಿ ಮಳೆ…
ಅವಸಾನದತ್ತ ಸಾಗಿದೆ ಶ್ರೀರಾಮೇಶ್ವರ ದೇಗುಲ
July 16, 2018ರಾಮನಾಥಪುರ: ತ್ರೇತಾ ಯುಗದ ಐತಿಹ್ಯ ಸಾರುವ ಇಲ್ಲಿನ ಸುಪ್ರಸಿದ್ಧ ಚರ್ತುಯುಗ ಮೂರ್ತಿ ಶ್ರೀ ರಾಮೇಶ್ವರ ದೇವಸ್ಥಾನವು ಸಂಬಂಧಪಟ್ಟವರ ನಿರ್ಲಕ್ಷ್ಯದಿಂದ ಅವಸಾನದತ್ತ ಸಾಗಿರುವುದು ಭಕ್ತರ ಆತಂಕಕ್ಕೆ ಕಾರಣವಾಗಿದೆ. ಶತಮಾನಗಳಷ್ಟು ಪುರಾತನವಾದ ರಾಮೇಶ್ವರ ದೇವಸ್ಥಾನವು ಜೀವನದಿ ಕಾವೇರಿ ದಡದಲ್ಲಿದ್ದು, ಇಲ್ಲಿನ ಶಿವಲಿಂಗ ಶ್ರೀರಾಮೇಶ್ವರಸ್ವಾಮಿ ಗೋಪುರ, ರಾಜ ಗೋಪುರ ಹಾಗೂ ದೇವಸ್ಥಾನದ ಸುತ್ತಲಿನ ತಡೆಗೋಡೆಗಳ ಮೇಲೆ ಗಿಡ ಗಂಟಿಗಳು ಬೆಳೆದು ದೇವಸ್ಥಾನದ ಕಟ್ಟಡಕ್ಕೆ ಹಾನಿಯನ್ನುಂಟು ಮಾಡಿದೆ. ಇತ್ತೀಚೆಗೆ ನಿರಂತರವಾಗಿ ಸುರಿಯು ತ್ತಿರುವ ಮಳೆಯಿಂದ ಶ್ರೀ ರಾಮೇಶ್ವರ ಸ್ವಾಮಿ ದೇವಾಲಯ ಗರ್ಭಗುಡಿ ಸೇರಿ…
ಕನ್ನಡ ಮಠದ 209ನೇ ಸಂಸ್ಥಾಪನಾ ದಿನಾಚರಣೆ
July 1, 2018ರಾಮನಾಥಪುರ: ಕನ್ನಡ ಭಾಷೆಗಾಗಿ ಕರ್ನಾಟಕದಲ್ಲಿರುವ ಮಠಗಳಲ್ಲಿ ಕೊಡಗಿನಲ್ಲಿನ ಅಮ್ಮತ್ತಿ ಕನ್ನಡ ಮಠ ವಿಶೇಷವಾದದ್ದು ಎಂದು ಶಾಸಕ ಡಾ. ಎ.ಟಿ.ರಾಮಸ್ವಾಮಿ ಹೇಳಿದರು. ಹಾಸನ-ಮೈಸೂರು ಜಿಲ್ಲಾ ಗಡಿಯಲ್ಲಿ ರುವ ಬೆಟ್ಟದಪುರದ ಮಠದ ಶ್ರೀ ಮನ್ನಿ ರಂಜನ ಶ್ರೀ ಚಿಕ್ಕವೀರದೇಶಿಕೇಂದ್ರ ಸ್ವಾಮೀಜಿ 90ನೇ ವರ್ಷದ ಗಣಾರಾಧನೆ ಮತ್ತು ಮಿನ್ನಿರಂಜನ ಶ್ರೀ ಚೆನ್ನವೀರದೇಶಿ ಕೇಂದ್ರ ಸ್ವಾಮೀಜಿ 37ನೇ ವರ್ಷದ ಗಣಾ ರಾಧನೆ, ಕನ್ನಡ ಮಠದ 209ನೇ ಸಂಸ್ಥಾಪನಾ ದಿನಾಚರಣೆ, ಶಿವಾನುಭವ ಗೋಷ್ಠಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಅನೇಕ ಧಾರ್ಮಿಕ…
ಶಿಕ್ಷಣಕ್ಕೆ ಸುತ್ತೂರು ಸ್ವಾಮೀಜಿ ಕೊಡುಗೆ ಅನನ್ಯ
June 29, 2018ರಾಮನಾಥಪುರ: ‘ಇಂದಿನ ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬರ ಅಭಿ ವೃದ್ಧಿಗೆ ಶಿಕ್ಷಣ ಮುಖ್ಯವಾಗಿದೆ ಎಂಬುದನ್ನು ಮನಗೊಂಡಿದ್ದ ಸುತ್ತೂರಿನ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಜೀವನಾದರ್ಶಗಳು ಮುಂದಿನ ಪೀಳಿಗೆಗೆ ದಾರಿ ದೀಪವಾಗಿದೆ’ ಎಂದು ಮೈಸೂರು ಶೀರಮಳ್ಳಿ ಮಠದ ಮುಮ್ಮಡಿ ಮುರುಗಿ ಸ್ವಾಮೀಜಿ ಹೇಳಿದರು. ರಾಮನಾಥಪುರದ ಹತ್ತಿರವಿರುವ ನಿಡು ವಣಿ ಕೊಪ್ಪಲು ಗ್ರಾಮದ ಸಿದ್ದೇಶ್ವರ ದೇವ ಸ್ಥಾನದಲ್ಲಿ ನಡೆದ ಸುತ್ತೂರು ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಜಯಂತಿ ಅಂಗ ವಾಗಿ ಶಿವರಾತ್ರೀಶ್ವರ ಧಾರ್ಮಿಕದತ್ತಿಯಿಂದ…