ಶ್ರೀರಂಗಪಟ್ಟಣ, ಆ.23-ಇತ್ತೀಚೆಗೆ ಕೊಡಗಿನಲ್ಲಿ ಭಾರೀ ಮಳೆ ಸುರಿದ ಪರಿ ಣಾಮ ಕೆಆರ್ಎಸ್ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ನೀರನ್ನು ಅಣೆಕಟ್ಟೆಯಿಂದ ಹೊರ ಬಿಟ್ಟ ಪರಿಣಾಮ ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ನೀರಿನ ರಭಸ ಹೆಚ್ಚಾಗಿದ್ದ ಕಾರಣ ಪಕ್ಷಿಧಾಮದಲ್ಲಿದ್ದ 23 ನಡುಗಡ್ಡೆಗಳ ಪೈಕಿ ಕಾಡು ಹುಣಸೇಮರ ಐಲ್ಯಾಂಡ್, ಸ್ಟೋನ್ ಬಿಲ್ ಐಲ್ಯಾಂಡ್, ಸ್ಟೋನ್ ಫ್ಲವರ್ ಐಲ್ಯಾಂಡ್, ನೀರಂಜಿ ಐಲ್ಯಾಂಡ್, ಅತ್ತಿ ಮರ ಐಲ್ಯಾಂಡ್, ಪರ್ಪಲ್ ಹೆರಾನ್ ಐಲ್ಯಾಂಡ್, ಹೊಳೆಮಧ್ಯೆ ಐಲ್ಯಾಂಡ್, ಬಿದುರಿನ ಐಲ್ಯಾಂಡ್ ಸೇರಿದಂತೆ 10…
ಮೈಸೂರು
ಉತ್ತರ ಬೃಂದಾವನಕ್ಕೆ ಪ್ರವೇಶ ನಿಷೇಧ: ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತ
August 11, 2018ಮೈಸೂರು: ಕೃಷ್ಣರಾಜ ಸಾಗರ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಗೆ ಬಿಡುತ್ತಿರುವುದರಿಂದ ಮುಂಜಾಗ್ರತೆಯಾಗಿ ಉತ್ತರ ಬೃಂದಾವನಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ. ಹಾರಂಗಿ ಅಣೆಕಟ್ಟೆಯಿಂದ 20,000 ಕ್ಯೂಸೆಕ್ಸ್ ನೀರನ್ನು ಬಿಡುತ್ತಿರುವ ಕಾರಣ ಕೆಆರ್ಎಸ್ ಅಣೆಕಟ್ಟೆಯಿಂದ 70 ಸಾವಿರ ಕ್ಯೂಸೆಕ್ಸ್ ನೀರನ್ನು ಇಂದು ಮುಂಜಾನೆ ಯಿಂದ ಕಾವೇರಿ ನದಿಗೆ ಬಿಡಲಾಗುತ್ತಿದೆ. 40,000 ಕ್ಯೂಸೆಕ್ಸ್ಗಿಂತ ಹೆಚ್ಚು ನೀರನ್ನು ಹೊರ ಬಿಟ್ಟಲ್ಲಿ ಬೃಂದಾವನದ ಉತ್ತರ ಭಾಗದ ಎಡಮುರಿಗೆ ನೀರು ತುಂಬುವುದರಿಂದ ಅಪಾಯ ತಪ್ಪಿಸುವ ಸಲುವಾಗಿ ಬೋಟಿಂಗ್ ಪಾಯಿಂಟ್ನಿಂದ ಉತ್ತರ ಬೃಂದಾವನಕ್ಕೆ ಪ್ರವಾಸಿಗರು ಪ್ರವೇಶಿಸದಂತೆ…