ಮೈಸೂರು: ಮೈಸೂರಿನ ಬಲ್ಲಾಳ್ ಸರ್ಕಲ್ನಲ್ಲಿರುವ ರವಿವರ್ಮ ಕಲಾ ಸಂಸ್ಥೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಇತ್ತೀಚೆಗೆ ಮಣ್ಣಿನ ಕಲಾಕೃತಿ ತಯಾರಿಕೆ ಕಾರ್ಯಾಗಾರÀ ನಡೆಯಿತು. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಮಣ್ಣಿನ ಮೂರ್ತಿ ತಯಾರಿಕೆ ಬಗ್ಗೆ ತಿಳಿದುಕೊಂಡರು. ಕಲಾಕೃತಿಗಳ ತಯಾರಿಕೆ, ಬಣ್ಣ ಹಚ್ಚುವುದು ಹಾಗೂ ಕಲೆಗೆ ಸಂಬಂಧಪಟ್ಟ ವಿಚಾರಗಳ ಕುರಿತು ತರಬೇತಿ ನೀಡಲಾಯಿತು. ಸ್ಟೆನ್ಸಿಲ್ನಲ್ಲಿ ಕಲಾಕೃತಿಗಳನ್ನು ಬಿಡಿಸುವುದು, ಮೂರ್ತಿಗಳ ನಿರ್ಮಾಣದಲ್ಲಿ ಬಳಸಲಾಗುವ ವಸ್ತುಗಳು, ವಿನ್ಯಾಸ ಹಾಗೂ ತಾಂತ್ರಿಕತೆ ಬಗ್ಗೆ ಮಾಹಿತಿ ನೀಡಲಾಯಿತು. ಆಯಿಲ್ ಪೇಂಟಿಂಗ್, ವಾಟರ್ ಕಲರಿಂಗ್,…