ಮೈಸೂರು: ರಿಯಾಯಿತಿ ಮತ್ತು ಸುಲಭ ಕಂತಿನಲ್ಲಿ ವಿವಿಧ ಬಡಾವಣೆಗಳಲ್ಲಿ ನಿವೇಶನ ಕೊಡುವುದಾಗಿ ಕೋಟ್ಯಾಂತರ ರೂ. ವಂಚಿಸಿ 14 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉದಯಗಿರಿ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ರಾಜೀವ ನಗರದಲ್ಲಿ ಮೈಸೂರು ಹೋಂ ಡೆವಲಪರ್ಸ್ ಎಂಬ ಕಂಪನಿ ನಡೆಸುತ್ತಿದ್ದ ಸಯ್ಯದ್ ನಿಜಾಂ ಅಲಿ ಎಂಬಾತನೇ ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡು ಇದೀಗ ಸೆರೆ ಸಿಕ್ಕವ ನಾಗಿದ್ದಾನೆ. ಆರೋಪಿ ಸಯ್ಯದ್ ನಿಜಾಂ ಅಲಿ ಮೈಸೂರು ತಾಲೂಕು, ಕಸಬಾ ಹೋಬಳಿ ಹಾಗೂ ಲಿಂಗಾಂಬುಧಿ ಗ್ರಾಮ, ರಾಜಾಜಿನಗರ ಬಡಾವಣೆ, ಆರ್.ಆರ್. ನಗರದಲ್ಲಿ ರಿಯಾಯಿತಿ…