ಮೈಸೂರು: ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ಭಾನು ವಾರ ನಡೆಯುವ ಗಣರಾಜ್ಯೋ ತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾ ಡಲು ಹಾಗೂ ಸುಗಮ ಸಂಚಾರ ಕ್ಕಾಗಿ ಸಾರ್ವಜನಿಕರು ಕೆಲವು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಗರ ಪೊಲೀಸ್ ಆಯುಕ್ತರು ಕೋರಿದ್ದಾರೆ. ಜ.26ರಂದು ಗಣರಾಜ್ಯೋತ್ಸವಕ್ಕೆ ಆಗಮಿಸುವ ಗಣ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿ.ಪಂ ಅಧ್ಯಕ್ಷರು, ಉಪಾ ಧ್ಯಕ್ಷರು, ನಗರಪಾಲಿಕೆ ಸದಸ್ಯರುಗಳು ಬನ್ನಿಮಂಟಪದ ಮುಖ್ಯ ದ್ವಾರದ ಮೂಲಕ ಪ್ರವೇಶಿಸಬೇಕು. ಇವರ ವಾಹನಗಳಿಗೆ ಮುಖ್ಯ ದ್ವಾರದ ಎಡಭಾಗದಲ್ಲಿ ಪಾರ್ಕಿಂಗ್…
ಮಹಾಜನ ಕಾಲೇಜಿನಲ್ಲಿ ಅಪೂರ್ವ ನೋಟು, ನಾಣ್ಯಗಳ ಪ್ರದರ್ಶನ
January 25, 2020ಮೈಸೂರು: 71ನೇ ಗಣರಾಜ್ಯೋತ್ಸವದ ಅಂಗವಾಗಿ ಮೈಸೂರಿನ ಜಯ ಲಕ್ಷ್ಮೀಪುರಂನ ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಅಪರೂಪದ ನೋಟು ಮತ್ತು ನಾಣ್ಯಗಳ ಪ್ರದರ್ಶನ ಆಯೋಜಿಸಲಾಗಿದೆ. ಕೊಟಕ್ ಮಹೀಂದ್ರ ಬ್ಯಾಂಕ್ನ ನಿವೃತ್ತ ಹಿರಿಯ ವ್ಯವಸ್ಥಾಪಕ ಎಂ.ಎನ್. ಮುರಳೀಕೃಷ್ಣ ಅವರು ಈ ಪ್ರದರ್ಶನವನ್ನು ನಡೆಸಿಕೊಡುತ್ತಿದ್ದಾರೆ. ಕಾಲೇಜಿನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಉಚಿತ ಪ್ರವೇಶದೊಂದಿಗೆ ಆಯೋ ಜಿಸಲಾಗಿದೆ. ರಂಗಾಯಣ ನಿರ್ದೇಶಕ ಅಡ್ಡಂಡ ಸಿ….
ದೆಹಲಿಯ ಗಣರಾಜ್ಯೋತ್ಸವದ ಪೆರೇಡ್ನಲ್ಲಿ ಪಾಲ್ಗೊಂಡು ಬೀಗಿದ ಮೈಸೂರಿನ ವಿದ್ಯಾರ್ಥಿಗಳು
January 28, 2019ಮೈಸೂರು: ಗಣರಾಜ್ಯೋತ್ಸವದ ದಿನದಂದು ದೆಹಲಿಯ ರಾಜಪತ್ನಲ್ಲಿ ನಡೆದ ಭವ್ಯ ಪೆರೇಡ್ನಲ್ಲಿ ಎನ್ಸಿಸಿಯ ಮೂರು ವಿಭಾಗಗಳಿಂದ ನಾಲ್ವರು ವಿದ್ಯಾರ್ಥಿನಿಯರು ಒಳಗೊಂಡಂತೆ ಮೈಸೂರಿನ 12 ವಿದ್ಯಾರ್ಥಿಗಳು ಪಾಲ್ಗೊಂಡು ಗಮನ ಸೆಳೆದಿದ್ದಾರೆ. ಎನ್ಸಿಸಿ ಭೂದಳ, ವಾಯುದಳ, ನೌಕದಳದ ಕೆಡೆಟ್ಗಳು ದೆಹಲಿಯಲ್ಲಿ ನಡೆಯುವ ಆರ್ಡಿ ಪೆರೇಡ್ನಲ್ಲಿ ಭಾಗವಹಿಸುವ ಕನಸು ಕಾಣುವುದು ಸಹಜ. ಸತತ ಪರಿಶ್ರಮ, ಕವಾಯತ್ನಲ್ಲಿ ಉತ್ತಮ ಪ್ರದರ್ಶನ ನೀಡುವವರಿಗೆ ಮಾತ್ರ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪೆರೇಡ್ನಲ್ಲಿ ಭಾಗವಹಿಸುವ ಅವಕಾಶ ದೊರೆಯಲಿದೆ. ದೇಶದ ಎಲ್ಲಾ ರಾಜ್ಯಗಳ ಎನ್ಸಿಸಿ ಕೆಡೆಟ್ಗಳು ಹಾತೊರೆಯುವ ಈ ಪೆರೇಡ್ನಲ್ಲಿ…
ಪ್ರಣಬ್ ಮುಖರ್ಜಿ, ಭೂಪೇನ್ ಹಜಾರಿಕಾ, ನಾನಾಜಿ ದೇಶಮುಖ್ಗೆ `ಭಾರತ ರತ್ನ’
January 26, 2019ನವದೆಹಲಿ: ಕೇಂದ್ರ ಸರ್ಕಾರ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಖ್ಯಾತ ಗಾಯಕ ಭೂಪೇನ್ ಹಜಾರಿಕಾ ಹಾಗೂ ಸಮಾಜ ಸೇವಕ ನಾನಾಜಿ ದೇಶಮುಖ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ `ಭಾರತ ರತ್ನ’ ನೀಡಿ ಗೌರವಿಸಿದೆ. 70ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ಸೇರಿದಂತೆ ಮೂವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿದ್ದು, ಕೃಷಿ, ಪತ್ರಿಕೋದ್ಯಮ ಮತ್ತು ಗ್ರಾಮ ವಿಕಾಸದಲ್ಲಿ ತೊಡಗಿಸಿಕೊಂಡಿದ್ದ ನಾನಾಜಿ ದೇಶಮುಖ್ ಹಾಗೂ ಭೂಪೇನ್ ಹಜಾರಿಕಾ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಲಾಗಿದೆ….
112 ಸಾಧಕರಿಗೆ ಪದ್ಮ ಪುರಸ್ಕಾರ
January 26, 2019ನವದೆಹಲಿ: ದೇಶದ ಅತ್ಯುನ್ನತ್ತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ, ಪದ್ಮಭೂಷಣ ಹಾಗೂ ಪದ್ಮವಿಭೂಷಣ ಪುರಸ್ಕಾರ ಪಟ್ಟಿ ಶುಕ್ರವಾರ ರಾತ್ರಿ ಘೋಷಣೆಯಾಗಿದ್ದು, ಕರ್ನಾಟಕದ ಐವರು ಸೇರಿದಂತೆ ಒಟ್ಟು 112 ಸಾಧಕರು ಪ್ರತಿಷ್ಠಿತ ನಾಗರಿಕ ಗೌರವಕ್ಕೆ ಪಾತ್ರರಾಗಿದ್ದಾರೆ. ನಾಲ್ವರಿಗೆ ಪದ್ಮವಿಭೂಷಣ, 14 ಸಾಧಕರಿಗೆ ಪದ್ಮಭೂಷಣ, 94 ಗಣ್ಯರಿಗೆ ಪದ್ಮಶ್ರೀ ಪುರಸ್ಕಾರ ಘೋಷಣೆಯಾಗಿದೆ. ಕರ್ನಾಟಕದ ಸಾಧಕರು: ಪರಿಸರ ಪ್ರೀತಿಯ ಸಾಲು ಮರದ ತಿಮ್ಮಕ್ಕ, ಖ್ಯಾತ ಸರೋದ್ ವಾದಕರೂ ಆದ ಮೈಸೂರಿನ ರಾಜೀವ್ ತಾರಾನಾಥ್, ತಿ.ನರಸೀಪುರ ತಾಲೂಕಿನ ಮೂಗೂರು ಮೂಲದ ಚಿತ್ರ ನಿರ್ದೇಶಕ, ನಟ,…
ನಿರ್ದಿಷ್ಟ ಗುರಿಯೊಂದಿಗೆ ಮತ ಹಕ್ಕು ಚಲಾಯಿಸೋಣ
January 26, 2019ನವದೆಹಲಿ: ಹದಿನೇಳನೇ ಲೋಕಸಭೆಗೆ ಚುನಾವಣೆ ಸಮೀಪಿಸುತ್ತಿದೆ. ಎಲ್ಲರೂ ನಿರ್ದಿಷ್ಟ ಗುರಿಯೊಂದಿಗೆ ಮತದಾನದ ಹಕ್ಕು ಚಲಾಯಿಸೋಣ. ನಮ್ಮ ಸರಿಯಾದ ನಿರ್ಧಾರ ದೇಶದ ದಿಕ್ಕನ್ನೇ ಬದ ಲಾಯಿಸುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಜನತೆಗೆ ಕರೆ ನೀಡಿದ್ದಾರೆ. 70ನೇ ಗಣರಾಜ್ಯೋತ್ಸವದ ಮುನ್ನಾ ದಿನವಾದ ಶುಕ್ರವಾರ ಸಂಜೆ ಮಾಡಿದ ದೂರ ದರ್ಶನ ಭಾಷಣದಲ್ಲಿ ಅವರು, ದೇಶದ ಜನತೆಗೆ 70ನೇ ಗಣರಾಜ್ಯೋತ್ಸವದ ಶುಭಾಶಯಗಳು. ಈ ಬಾರಿಯ ಗಣರಾಜ್ಯೋತ್ಸವ ಬಹಳ ವಿಶೇಷವಾಗಿದೆ. ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮದಿನದ ನಂತರ ಈ…