ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ 28 ಲೋಕ ಸಭಾ ಕ್ಷೇತ್ರಗಳಿಗೂ ಸಂಭವನೀಯ ಪಟ್ಟಿ ಅಂತಿಮಗೊಳಿಸಿದೆ. ರಾಜ್ಯ ಮುಖಂಡರು ಆರ್ಎಸ್ಎಸ್ ನಾಯಕರೊಟ್ಟಿಗೆ ಚುನಾವಣೆ ಸಂಬಂಧ ಸುದೀರ್ಘ ಚರ್ಚೆ ನಡೆಸಿ, ಅಭ್ಯರ್ಥಿ ಗಳ ಆಯ್ಕೆಯನ್ನು ಬಹುತೇಕ ಪೂರ್ಣಗೊಳಿಸಿದ್ದಾರೆ. ಬಹುತೇಕ ಹಾಲಿ ಸಂಸದರಿಗೆ ಮತ್ತೆ ಚುನಾವಣೆಗೆ ಸ್ಪರ್ಧಿ ಸಲು ಅವಕಾಶ ನೀಡಿದ್ದು, ಕಳೆದ ಚುನಾವಣೆಯಲ್ಲಿ ಜಯ ಗಳಿಸದ ಕ್ಷೇತ್ರಗಳಿಗೆ ಗೆಲ್ಲುವ ಅಭ್ಯರ್ಥಿಗೆ ಒತ್ತು ನೀಡಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ 17 ಸಂಸದರು ಗೆದ್ದಿದ್ದ ಬಿಜೆಪಿಗೆ ಈ…
ಮಂಡ್ಯದಲ್ಲಿ ಕಮಲ ಮಂದಿರ ಲೋಕಾರ್ಪಣೆ
June 19, 2018ಮಂಡ್ಯ: ಆರ್ಎಸ್ಎಸ್ ಶಾಖಾ ಕೇಂದ್ರಗಳು ಸಂಸ್ಕಾರ ಕೇಂದ್ರಗಳಾ ದರೆ, ಕಾರ್ಯಾಲಯ ತಪಸ್ವಿಗಳ ಕೇಂದ್ರ ವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸರ ಕಾರ್ಯವಾಹ ಸಿ.ಆರ್. ಮುಕುಂದ ಅಭಿಪ್ರಾಯಪಟ್ಟರು. ಇಲ್ಲಿನ ನೆಹರೂ ನಗರದ 2ನೇ ಕ್ರಾಸ್ ನಲ್ಲಿ ಶ್ರೀಜನಜಾಗರಣ ಟ್ರಸ್ಟ್ ವತಿಯಿಂದ ನಿರ್ಮಿಸಿರುವ ಆರ್ಎಸ್ಎಸ್ನ ನೂತನ ಕಾರ್ಯಾಲಯ “ಕಮಲ ಮಂದಿರ’’ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸಮಾಜ ಮತ್ತು ದೇಶದ ಬಗ್ಗೆ ನಿಸ್ವಾರ್ಥವಾಗಿ ಸದಾ ಚಿಂತಿಸುವ ತಪಸ್ವಿ ಗಳ ಕೇಂದ್ರವೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಾಲಯ…
ರಾಷ್ಟ್ರೀಯವಾದ ಧರ್ಮ, ಜನಾಂಗಕ್ಕೆ ಸೀಮಿತ ಅಲ್ಲ ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಅಭಿಮತ
June 8, 2018ನಾಗ್ಪುರ: ರಾಷ್ಟ್ರೀಯತೆ ಎಲ್ಲ ಕ್ಕಿಂತ ಮಿಗಿಲಾದದ್ದು, ರಾಷ್ಟ್ರೀಯವಾದ ಧರ್ಮ, ಜನಾಂಗಕ್ಕೆ ಸೀಮಿತ ಅಲ್ಲ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಇಂದು ನಾಗ್ಪುರದಲ್ಲಿ ಆರ್ಎಸ್ಎಸ್ನ ಸಂಘ ಶಿಕ್ಷಾ ವರ್ಗ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಭಾರತ ಅತ್ಯುತ್ತಮ, ಸಮರ್ಥ ಆಡಳಿತ ಹೊಂದಿದೆ ಎಂದು 7ನೇ ಶತಮಾನದಲ್ಲೇ ವಿದೇಶದ ವಿದ್ವಾಂಸರು ನಮ್ಮ ದೇಶವನ್ನು ಕೊಂಡಾಡಿದ್ದರು. ನಮ್ಮ ದೇಶಕ್ಕೆ 5 ಸಾವಿರ ವರ್ಷಗಳ ಸಾಂಸ್ಕೃತಿಕ ಅಡಿಪಾಯ ಭದ್ರ ವಾಗಿದೆ. ಸಂಸ್ಕೃತಿಯ ಏಕತೆ, ಮೂಲಭೂತ ಐಕ್ಯತೆ ನಮ್ಮ…