ಮೈಸೂರು: ರಾಜ್ಯ ಮಾಹಿತಿ ಆಯೋಗದಲ್ಲಿ 10 ಸಾವಿರ ಆರ್.ಟಿ.ಐ ಮೇಲ್ಮನವಿ ಅರ್ಜಿ ವಿಚಾರಣೆಗೆ ಬಾಕಿ ಇವೆ ಎಂದು ರಾಜ್ಯ ಮಾಹಿತಿ ಆಯುಕ್ತ ಕೆ.ಎಂ.ಚಂದ್ರೇಗೌಡ ತಿಳಿಸಿದ್ದಾರೆ. ಮೈಸೂರಿನ ಜಿಪಂ ಕಚೇರಿಯ ಮಿನಿ ಸಭಾಂಗಣದಲ್ಲಿ ಇಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಮಾಹಿತಿ ಹಕ್ಕು ಅಧಿನಿಯಮದಡಿ ಬಾಕಿ ಉಳಿದಿದ್ದ ಪ್ರಕರಣಗಳ ಮೇಲ್ಮನವಿಗಳ ವಿಚಾರಣೆ ನಡೆಸಿದ ಬಳಿಕ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು. ಆಯೋಗಕ್ಕೆ ಈ ಭಾಗದಿಂದ 30 ಅರ್ಜಿಗಳು ಬಂದಿದ್ದವು. ಆ ಪೈಕಿ 16 ಇತ್ಯರ್ಥಗೊಂಡಿದ್ದು, ಸ್ಥಳದಲ್ಲೇ ಮಾಹಿತಿ ಕೊಡಿಸಲಾಗಿದೆ….