ಮೈಸೂರು: ಬಲಿಷ್ಠ ಭಾರತ ಹಾಗೂ ಹಸಿರು ಭಾರತ ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ಶಾಲಾ ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದಕ್ಕಾಗಿ ಪ್ರೇರಣೆ ನೀಡುವ ಕಾರ್ಯಕ್ರಮವನ್ನು ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ ಕನಕಗಿರಿ ಶಾಲೆಯಲ್ಲಿ ಶಾಸಕ ಎಸ್.ಎ.ರಾಮದಾಸ್ ಚಾಲನೆ ನೀಡಿದರು. ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5ರಿಂದ 10ನೇ ತರಗತಿ ವಿದ್ಯಾರ್ಥಿಗಳನ್ನು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿ ಬಲಿಷ್ಠ ಹಾಗೂ ಹಸಿರು ಭಾರತ ನಿರ್ಮಾಣ ಮುನ್ನುಡಿ ಬರೆಯುವ ಕಾರ್ಯಕ್ರಮದಲ್ಲಿ ಕನಕಗಿರಿಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಶಾಸಕ…
ಮಳೆ ನೀರು ಸರಾಗವಾಗಿ ಹರಿದು ಹೋಗಲು 72 ಕಿ.ಮೀ. ರಾಜಕಾಲುವೆ ಹೂಳೆತ್ತಲು ಅಧಿಕಾರಿಗಳಿಗೆ ಸೂಚನೆ
June 29, 2018ಮಳೆ ಹಾವಳಿ ತಡೆಗೆ ಅಧಿಕಾರಿಗಳೊಂದಿಗೆ ಶಾಸಕ ರಾಮದಾಸ್ ಸಭೆ ಮೈಸೂರು: ಮಳೆಗಾಲ ಆರಂಭವಾಗಿದ್ದು, ಕೆ.ಆರ್.ಕ್ಷೇತ್ರ ಸೇರಿದಂತೆ ಮೈಸೂರಿನಲ್ಲಿ 72 ಕಿ.ಮೀ. ರಾಜಕಾಲುವೆಯ ನಕ್ಷೆ ಸಿದ್ಧಪಡಿಸುವುದರೊಂದಿಗೆ ಒಂದು ತಿಂಗಳೊಳಗೆ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಹೂಳೆತ್ತಲು ಕ್ರಮ ಕೈಗೊಳ್ಳುವಂತೆ ಶಾಸಕ ಎಸ್.ಎ.ರಾಮದಾಸ್ ಅವರು ಮುಡಾ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು ನಗರ ಪಾಲಿಕೆ ಹಳೆ ಕೌನ್ಸಿಲ್ ಸಭಾಂಗಣದಲ್ಲಿ ಗುರುವಾರ ನಡೆದ ಕೆ.ಆರ್.ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್ ಸಮ್ಮುಖದಲ್ಲಿ ನಡೆದ ವಿವಿಧ ಇಲಾಖೆಯ…
ಪಾದಚಾರಿ ಮಾರ್ಗ, ಮಾಂಸಹಾರಿ ಫಾಸ್ಟ್ಫುಡ್ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ
June 28, 2018ಶಾಸಕ ರಾಮದಾಸರ ಮುಂದುವರೆದ ಪಾದಯಾತ್ರೆ ಮೈಸೂರು: ಕೆ.ಆರ್.ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ಪಾದಚಾರಿ ಮಾರ್ಗವನ್ನು ತೆರವುಗೊಳಿಸುವುದರೊಂದಿಗೆ ರಸ್ತೆ ಬದಿಗಳಲ್ಲಿ ಮಾಂಸಹಾರಿ ಫಾಸ್ಟ್ಫುಡ್ಗಳಿಗೆ ಅನುಮತಿ ನೀಡಬಾರದೆಂದು ಶಾಸಕ ಎಸ್.ಎ.ರಾಮದಾಸ್ ಸೂಚನೆ ನೀಡಿದ್ದಾರೆ. ಮೈಸೂರು ನಗರ ಪಾಲಿಕೆಯ 3ನೇ ವಾರ್ಡ್ನಲ್ಲಿ (ಪುನರ್ ವಿಂಗಡಣೆ ಬಳಿಕ 49ನೇ ವಾರ್ಡ್) ಬುಧವಾರ ಬೆಳಿಗ್ಗೆ 6.30ರಿಂದ ನ್ಯಾಯಾಲಯದ ಮುಂಭಾಗವಿರುವ ಮನುವನ ಪಾರ್ಕ್ನಿಂದ ಪಾದಯಾತ್ರೆ ಆರಂಭಿಸಿದ ಅವರು, ವಾಯುವಿಹಾರಿಗಳು, ಯೋಗಪಟುಗಳು, ದೈಹಿಕ ಕಸರತ್ತು ಮಾಡುವವರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಗೀತಾ ರಸ್ತೆ, ಆರ್ಟಿಓ ವೃತ್ತ, ಲಕ್ಷ್ಮೀಪುರಂ, ಮದ್ವಾಚಾರ್ ರಸ್ತೆ,…
ಪಾದಯಾತ್ರೆ ಮೂಲಕ ಶಾಸಕ ರಾಮದಾಸ್ರಿಂದ ನಾಗರಿಕರ ಸಮಸ್ಯೆಗಳ ಪರಿಹಾರ ಸೂತ್ರ
June 27, 2018ಮೈಸೂರು: ಮೈಸೂರಿನ ಕೆಆರ್ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 2ರಲ್ಲಿ ಮಂಗಳವಾರ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಎಸ್.ಎ.ರಾಮದಾಸ್ ಜನಸ್ಪಂದನಾ ಯಾತ್ರೆ ನಡೆಸಿ, ನಾಗರಿಕ ಸಮಸ್ಯೆಗಳನ್ನು ಆಲಿಸಿ ನಿಗದಿತ ಸಮಯದೊಳಗೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಾರ್ಡ್ ಸಂಖ್ಯೆ 2ರ (ಪುನರ್ ವಿಂಗಡಣೆ ಬಳಿಕ ವಾರ್ಡ್ ಸಂಖ್ಯೆ-50) ವ್ಯಾಪ್ತಿಯಲ್ಲಿ ಪಾಲಿಕೆ, ಸ್ಲಂ ಬೋರ್ಡ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳೊಂದಿಗೆ ಪಾದಯಾತ್ರೆ ಮೂಲಕ ನಾಗರಿಕರ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಒಳಚರಂಡಿ ವ್ಯವಸ್ಥೆ, ರಸ್ತೆ ದುರಸ್ತಿ ಸೇರಿದಂತೆ ನಾನಾ ಮೂಲಭೂತ…
ವಾಹನ ಚಾಲಕರ ಅನುಕೂಲಕ್ಕಾಗಿ ಹೆದ್ದಾರಿಯ ಪ್ರತಿ 25 ಕಿಮೀಗೊಂದರಂತೆ ತಂಗುದಾಣ
June 27, 2018ಶಾಸಕ ಎಸ್.ಎ. ರಾಮದಾಸ್ ಪ್ರಕಟ ಪ್ರಧಾನಿ ಮೋದಿಯವರ ಸದುದ್ದೇಶ ವಿವರಣೆ ಮೈಸೂರು: ವಾಹನ ಚಾಲಕರ ಅನುಕೂಲಕ್ಕಾಗಿ ರಾಷ್ಟ್ರೀಯ ಹೆದ್ದಾರಿಯ ಪ್ರತಿ 25 ಕೀ.ಮಿ ಅಂತರದಲ್ಲಿ ಒಂದೊಂದು ತಂಗುದಾಣ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ ಎಂದು ಶಾಸಕರೂ ಆದ ಮಾಜಿ ಸಚಿವ ಎಸ್.ಎ.ರಾಮದಾಸ್ ಹೇಳಿದರು. ಮೈಸೂರಿನ ವೀಣೆ ಶೇಷಣ್ಣ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೈಸೂರು ಜಿಲ್ಲಾ ಪ್ರವಾಸಿ ವಾಹನ ಚಾಲಕರು ಮತ್ತು ಮಾಲೀಕರ ಯೋಗಕ್ಷೇಮಾಭಿವೃದ್ಧಿ ಸಂಘದ 7ನೇ ವಾರ್ಷಿಕ ಸರ್ವಸದಸ್ಯರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ನ್ಯಾಷನಲ್…
ಕಲಿಯುವ ಆಸಕ್ತಿ ಇದ್ದರೆ ವ್ಯವಸ್ಥೆ ತಾನಾಗೆ ಲಭ್ಯವಾಗುತ್ತದೆ
June 27, 2018ಮೈಸೂರು: ಶ್ರೀ ನಟರಾಜ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಸ್ನೇಹ ಸಿಂಚನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀ ನಟರಾಜ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಚಿದಾನಂದ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಎಸ್.ಎ.ರಾಮದಾಸ್ ಮಾತನಾಡುತ್ತಾ, ಪಾಶ್ಚಿಮಾತ್ಯ ಸಂಸ್ಕøತಿಯನ್ನು ಅಳವಡಿಸಿಕೊಳ್ಳುವ ಈ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ಜ್ಞಾನದ ಜ್ಯೋತಿಯನ್ನು ಹಚ್ಚುವುದರ ಮೂಲಕ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರನ್ನು ಸ್ವಾಗತಿಸಿದ್ದು ವಿಶೇಷವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಇದು ಆಹ್ಲಾದಕರವಾಗಿದೆ. ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶದ…
14ನೇ ವಾರ್ಡ್ನಲ್ಲಿ ಶಾಸಕ ಎಸ್.ಎ.ರಾಮದಾಸ್ ಪಾದಯಾತ್ರೆ
June 25, 2018ಮೈಸೂರು: ಮೈಸೂರಿನ ಕೆಆರ್ ಕ್ಷೇತ್ರ ವ್ಯಾಪ್ತಿಯ 14ನೇ ವಾರ್ಡಿನಲ್ಲಿ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಎಸ್.ಎ.ರಾಮದಾಸ್ ಶನಿವಾರ ಪಾದಯಾತ್ರೆ ನಡೆಸಿ, ನಾಗರಿಕರ ಕುಂದು-ಕೊರತೆ ಆಲಿಸಿದರು. ವಾರ್ಡ್ ವ್ಯಾಪ್ತಿಯ ಮಧುವನ ಬಡಾವಣೆಯ ಬೀದಿ ದೀಪ ನಿರ್ವಹಣೆ, ಕುಡಿಯುವ ನೀರು ಸರಬರಾಜು ಹಾಗೂ ನಿವೇಶನಗಳ ಸಂಬಂಧ ಕೇಳಿ ಬಂದ ಸಮಸ್ಯೆಗಳನ್ನು ಆಲಿಸಿದ ಶಾಸಕರು, ನಿಗದಿತ ಅವಧಿಯೊಳಗೆ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಧುವನ ಬಡಾವಣೆಯ ಬೀದಿದೀಪಗಳ ನಿರ್ವಹಣಾ ವೆಚ್ಚವನ್ನು ನಿವಾಸಿಗಳಿಂದ ಸಂಗ್ರಹಿಸದೇ ಚೆಸ್ಕಾಂನಿಂದಲೇ ನಿರ್ವಹಣೆ ಮಾಡುವಂತೆ…
ಕೆ.ಆರ್.ಕ್ಷೇತ್ರದ ನಾಗರಿಕ ಸಮಸ್ಯೆಗಳ ನೀಲನಕ್ಷೆ ಸಿದ್ಧಪಡಿಸಿ
June 17, 2018ವಿವಿಧ ಇಲಾಖೆ ಅಧಿಕಾರಿಗಳಿಗೆ ಶಾಸಕ ರಾಮದಾಸ್ ಸೂಚನೆ ಜೂ.22ರಿಂದ ವಾರ್ಡ್ವಾರು ಪಾದಯಾತ್ರೆ ಮೂಲಕ ಸಮಸ್ಯೆಗೆ ಪರಿಹಾರ ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರದ ನೀರು ಸರಬರಾಜು, ಒಳಚರಂಡಿ, ರಸ್ತೆ ಸೇರಿದಂತೆ ವಿವಿಧ ನಾಗರಿಕ ಮೂಲ ಸಮಸ್ಯೆ ಬಗ್ಗೆ ವಾರ್ಡ್ವಾರು ನೀಲನಕ್ಷೆ ತಯಾರಿಸುವಂತೆ ಶಾಸಕ ಎಸ್.ಎ.ರಾಮದಾಸ್, ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿದ್ಯಾರಣ್ಯಪುರಂನಲ್ಲಿರುವ ತಮ್ಮ ಕಚೇರಿಯಲ್ಲಿ ಕೆ.ಆರ್.ಕ್ಷೇತ್ರದಲ್ಲಿ ಮುಂದಿನ ಒಂದು ವರ್ಷದ ಅವಧಿಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತಂತೆ ನಗರ ಪಾಲಿಕೆ, ವಾಣಿವಿಲಾಸ ನೀರು ಸರಬರಾಜು, ಒಳಚರಂಡಿ, ಅರಣ್ಯ, ತೋಟಗಾರಿಕಾ,…
ಮೈಸೂರಲ್ಲಿ ಬೃಹತ್ ಯೋಗ ಪ್ರದರ್ಶನಕ್ಕೆ ಸಹಕರಿಸುವಂತೆ ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ಗೆ ಶಾಸಕ ರಾಮದಾಸ್ ಮನವಿ
June 14, 2018ಮೈಸೂರು: ಮೈಸೂರು ರೇಸ್ಕೋರ್ಸ್ ಆವರಣದಲ್ಲಿ ಜೂ. 21ರಂದು ನಡೆಯಲಿರುವ ವಿಶ್ವ ಯೋಗ ದಿನದ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಸಹಕಾರ ನೀಡಬೇಕೆಂದು ಶಾಸಕ ಎಸ್.ಎ.ರಾಮದಾಸ್ ಅವರು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರಿಗೆ ಮನವಿ ಸಲ್ಲಿಸಿದರು. ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯ ಸೋನಾರ್ ಸ್ಟ್ರೀಟ್ನಲ್ಲಿರುವ ಸಚಿವ ಸಾ.ರಾ.ಮಹೇಶ್ ನಿವಾಸಕ್ಕೆ ಬುಧವಾರ ಯೋಗ ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರವಾಸೋದ್ಯಮ ಟಾಸ್ಕ್ಫೋರ್ಸ್ ಸದಸ್ಯರೊಂದಿಗೆ ಭೇಟಿ ನೀಡಿದ ಶಾಸಕ ಎಸ್.ಎ.ರಾಮದಾಸ್ ಅವರು, ಸಚಿವರನ್ನು ಆತ್ಮೀಯವಾಗಿ ಅಭಿನಂದಿಸಿದರು. ಬಳಿಕ ಕುಶಲೋಪರಿ ವಿಚಾರಿಸಿದರು. ಈ ವೇಳೆ ಎಸ್.ಎ.ರಾಮದಾಸ್ ಮಾತನಾಡಿ,…
ಲಿಂಗಾಂಬುದಿ ಕೆರೆಗೆ ಶಾಸಕ ರಾಮದಾಸ್ ಭೇಟಿ: ಕೆರೆ ಸಂರಕ್ಷಣೆ ಸಂಬಂಧ ಮುಡಾ, ಪಾಲಿಕೆ ಅಧಿಕಾರಿಗಳೊಂದಿಗೆ ಪರಿಶೀಲನೆ, ಕ್ರಮಕ್ಕೆ ಸೂಚನೆ
June 12, 2018ಮೈಸೂರು: ಮೈಸೂರಿನ ಶ್ರೀರಾಂಪುರ ಮತ್ತು ರಾಮಕೃಷ್ಣನಗರ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಲಿಂಗಾಂಬುದಿ ಕೆರೆಗೆ ಕಲುಷಿತ ನೀರು ಸೇರುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಮಾಜಿ ಸಚಿವರೂ ಆದ ಶಾಸಕ ಎಸ್.ಎ.ರಾಮದಾಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಲ ದಿನಗಳಿಂದ ಒಳಚರಂಡಿ ನೀರು ಸೋರಿಕೆಯಾಗಿ ಕೆರೆಗೆ ಹರಿಯುತ್ತಿರುವುದರಿಂದ ನೀರು ಕಲುಷಿತಗೊಂಡು ದುರ್ವಾಸನೆ ಸೂಸುವಂತಾಗಿತ್ತು. ನಿತ್ಯ ಕೆರೆ ಆವರಣದಲ್ಲಿ ವಾಯು ವಿಹಾರಕ್ಕೆ ಬರುವ ಸಾರ್ವಜನಿಕರು ಹಾಗೂ ಸುತ್ತಮುತ್ತಲ ಬಡಾವಣೆಗಳ ನಿವಾಸಿಗಳು ಕಲುಷಿತ ನೀರಿನ ದುರ್ವಾಸನೆಯಿಂದ ಕಿರಿಕಿರಿ ಅನುಭವಿಸುವಂತೆಯೂ ಆಗಿತ್ತು. ಈ ಹಿನ್ನೆಲೆಯಲ್ಲಿ…