ಮೈಸೂರು: ಮೈಸೂರು ವಕೀಲರ ಸಂಘದ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಎಸ್. ಆನಂದಕುಮಾರ್ ಮತ್ತು ಅವರ ತಂಡದ ಇತರೆ ಪದಾಧಿಕಾರಿಗಳು ಗುರುವಾರ ಅಧಿಕಾರ ಸ್ವೀಕರಿಸಿದರು. ನ್ಯಾಯಾಲಯದ ಆವರಣ ದಲ್ಲಿರುವ ಸಂಘದ ಕಚೇರಿಯಲ್ಲಿ ನಿರ್ಗಮಿತ ಅಧ್ಯಕ್ಷ ಜಿ.ವಿ.ರಾಮ ಮೂರ್ತಿ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಎಸ್. ಆನಂದಕುಮಾರ್, ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ, ಕ್ಯಾಂಟೀನ್ ಸುಧಾರಣೆ ಮಾಡುವುದಾಗಿ ಹೇಳಿದರು….