ಚಾಮರಾಜನಗರ: ಚಾಮರಾಜನಗರದಲ್ಲಿ ಇಂದು ವರುಣನ ವರ್ಷ ಧಾರೆಯ ನಡುವೆಯೇ ಸಂಗೀತದ ರಸಧಾರೆಯೇ ಹರಿಯಿತು. ಖ್ಯಾತ ಗಾಯಕಿ ಸಂಗೀತ ಕಟ್ಟಿ ಅವರ ಭಾವಗೀತೆ, ಜನಪದಗೀತೆ, ಭಕ್ತಿಗೀತೆಗಳ ಭಾವ ಲಹರಿ ನಗರದಲ್ಲೆಡೆ ಅನುರಣಿಸಿತು. ಚಾಮರಾಜನಗರದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಖ್ಯಾತ ಗಾಯಕಿ ಸಂಗೀತ ಕಟ್ಟಿ ಅವರ ಸಂಗೀತ ಕಾರ್ಯಕ್ರಮ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಇಲ್ಲಿನ ಶ್ರೀ ಚಾಮರಾಜೇಶ್ವರ ದೇವ ಸ್ಥಾನದ ಮುಂಭಾಗ ಹಾಕಲಾಗಿದ್ದ ಅದ್ಧೂರಿ ಬೃಹತ್ ವೇದಿಕೆಯಲ್ಲಿ ಆಯೋಜಿಸಲಾಗಿತ್ತು. ಎಲ್ಲರಿಗೂ ನಮಸ್ಕಾರ ಎನ್ನುತ್ತಾ ರಾತ್ರಿ…