ಮೈಸೂರು: ನೆನೆಗುದಿಗೆ ಬಿದ್ದಿರುವ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಕದಂಬ ಸೈನ್ಯ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯಿಸಿದೆ. ಸೇನೆಯ ರಾಜ್ಯಾಧ್ಯಕ್ಷ ಬೇಕ್ರಿ ಮಹೇಶ್ ಸೋಮವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ, ಕನ್ನಡ ಭಾಷೆಯ ಪರಿಣಾಮಕಾರಿ ಅನುಷ್ಠಾನ ಇನ್ನಿತರ ಕನ್ನಡ ಬೆಳವಣಿಕೆಗೆ ಪೂರಕವಾದ ವರದಿಯನ್ನು ಸರೋಜಿನಿ ಮಹಿಷಿ ಅವರು ನೀಡಿದ್ದರು. ಆದರೆ ದಶಕಗಳೇ ಕಳೆದರೂ ವರದಿ ಜಾರಿಗೆ ಯಾವ ಸರ್ಕಾರಗಳು ಮನಸ್ಸು ಮಾಡಿಲ್ಲ ಎಂದು ಆರೋಪಿಸಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ…