ಹಾಸನ: ಮೀಸಲಾತಿ ನಿಯಮ ಉಲ್ಲಂಘಿಸಿ ಟೆಂಡರ್ ಕರೆಯುವ ಮೂಲಕ ಇಂಜಿನಿಯರ್ ಪುಟ್ಟರಾಜು ದಲಿತ ವಿರೋಧಿ ನೀತಿ ಅನುಸರಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಎಸ್ಸಿ, ಎಸ್ಟಿ. ಗುತ್ತಿಗೆದಾರರ ಸಂಘದಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕಾವೇರಿ ನೀರಾವರಿ ನಿಗಮ, ಹೇಮಾವತಿ ಬಲದಂಡೆ ನಾಲಾ ವಿಭಾಗ ಹೊಳೇನರಸೀ ಪುರ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪುಟ್ಟರಾಜು ಅವರು ಹೂಳು ತೆಗೆಯುವ ಕಾಮಗಾರಿಗಳನ್ನು ಮೀಸಲಾತಿಗೆ ಬರದ ಹಾಗೆ ಅಂದಾಜು ಪಟ್ಟಿ ತಯಾರಿಸಿ, ಮೀಸಲಾತಿ ನಿಯಮ ಉಲ್ಲಂಘನೆ ಮಾಡಿ ಟೆಂಡರ್…