ಮೈಸೂರು: ಎಸ್ಸಿ-ಎಸ್ಟಿ ಸರ್ಕಾರಿ ನೌಕರರಿಗೆ ಮುಂಬಡ್ತಿ ನೀಡುವ ಸಂಬಂಧ ವಿಶೇಷ ಕಾಯ್ದೆ ತಂದು ಅನುಷ್ಠಾನಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಅತೀ ಶೀಘ್ರದಲ್ಲೇ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು ಎಂದು ಅಹಿಂಸಾ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಕೆ.ನಂಜಯ್ಯ ತಿಳಿಸಿದರು. ಈ ಬಗ್ಗೆ ದೂರವಾಣಿ ಮುಖೇನ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮುಂಬಡ್ತಿ ವಿಶೇಷ ಕಾಯಿದೆ ಸಂಬಂಧ ಕಳೆದ 25 ವರ್ಷಗಳಿಂದ ಅಹಿಂಸಾ ಸಂಘಟನೆ ಕಾನೂನು ಹೋರಾಟ ನಡೆಸುತ್ತಿದೆ. ಅಲ್ಲದೆ, ಇದರ ವಿರುದ್ಧ 2017ರ ಫೆಬ್ರವರಿ ತಿಂಗಳಲ್ಲಿ ಬಿ.ಕೆ.ಪವಿತ್ರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ನಲ್ಲಿ ನಮ್ಮ ಪರ…