ಮೈಸೂರು: ಪರಿಶಿಷ್ಟ ಪಂಗಡಕ್ಕೆ ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ದೊರಕಿಸಿಕೊಡುವ ನಿಟ್ಟಿನಲ್ಲಿ ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡಬೇಕೆಂದು ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಆಗ್ರಹಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ, ರಾಜ್ಯದಲ್ಲಿ ಸುಮಾರು 52 ಜಾತಿಗಳು ಪರಿಶಿಷ್ಟ ಪಂಗಡ ವ್ಯಾಪ್ತಿಗೆ ಬರಲಿದ್ದು, 60ರಿಂದ 65 ಲಕ್ಷ ಜನಸಂಖ್ಯೆ ಹೊಂದಿದೆ. ಇದರಲ್ಲಿ ಶೇ.90ರಷ್ಟು ಜನಸಂಖ್ಯೆ ಗ್ರಾಮೀಣ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿದೆ. ಈ ವರ್ಗಕ್ಕೆ ಮೂಲಸೌಲಭ್ಯ ಹಾಗೂ…