ಮೈಸೂರು: ಸರ್ಕಾರಿ ಉದ್ಯೋಗಗಳು ಮುಂದಿನ ದಿನಗಳಲ್ಲಿ ಸಿಗುವುದು ಕಷ್ಟಕರವಾಗಿ ಪರಿಣಮಿಸಲಿದ್ದು, ಮಹಿಳೆಯರು ಸರ್ಕಾರದ ಸವಲತ್ತು ಪಡೆದುಕೊಂಡು ಸ್ವಯಂ ಉದ್ಯೋಗ ಮಾಡುವುದಕ್ಕೆ ಮುಂದಾಗಬೇಕೆಂದು ಮೈಸೂರು ಜಿಲ್ಲಾ ಕೈಗಾರಿಕಾ ಸಂಸ್ಥೆಯ (ಡಿಐಸಿ) ಜಂಟಿ ನಿರ್ದೇಶಕ ರಾಮಕೃಷ್ಣೇಗೌಡ ಸಲಹೆ ನೀಡಿದ್ದಾರೆ. ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜಿಲ್ಲಾ ಕೈಗಾರಿಕಾ ಸಂಸ್ಥೆ ಆವರಣದಲ್ಲಿ ಬುಧವಾರ ಮಹಿಳಾ ವಾಣ ಜ್ಯ ಮತ್ತು ಕೈಗಾರಿಕೆಗಳ ಸಬಲೀಕರಣ(ವೆಬ್)ಸಂಸ್ಥೆ ಮಹಿಳಾ ಕೈಗಾರಿಕೋದ್ಯಮಿಗಳಿಗಾಗಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೈಗಾರಿಕಾ ಕ್ಷೇತ್ರಕ್ಕೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಅಗತ್ಯವಿದೆ. ಮಹಿಳೆಯರು…