ಮೈಸೂರು: ಸಿದ್ದ ಗಂಗಾ ಶ್ರೀಗಳು ಪವಾಡ ಪುರುಷ ರಾಗಿದ್ದು, ಧಾರ್ಮಿಕ ನೆಲೆಗಟ್ಟಿನ ಮೇಲೆ ಶಿಕ್ಷಣ ನೀಡಿದರು. ಸಿದ್ಧಗಂಗಾ ಶ್ರೀಕ್ಷೇತ್ರ ದಲ್ಲಿ ಶಿಕ್ಷಣ ಪಡೆದ ಬಹಳಷ್ಟು ಮಂದಿ ಅಧಿಕಾರಿ, ರಾಜಕಾರಣಿ ಹಾಗೂ ಸಂತ ರಾಗಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ಜೆ.ಕೆ.ಮೈದಾನದ ಅಮೃತ ಮಹೋ ತ್ಸವ ಭವನದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಸಮಿತಿ ಟ್ರಸ್ಟ್ ಹಾಗೂ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಯುವಕ ಮಂಡಲ್ ವತಿಯಿಂದ ಗುರು ವಾರ ಆಯೋಜಿಸಿದ್ದ ತ್ರಿವಿಧ ದಾಸೋಹಿ, ಕಾಯಕ…
ಮೈಸೂರಿನ ವಿವಿಧೆಡೆ ಸಿದ್ಧಗಂಗಾ ಶ್ರೀಗಳ ಪುಣ್ಯ ಸ್ಮರಣೆ
February 1, 2019ಮೈಸೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಲಿಂಗೈಕ್ಯ ಸಿದ್ಧಗಂಗಾ ಮಠದ ಡಾ. ಶ್ರೀ ಶಿವ ಕುಮಾರ ಸ್ವಾಮಿಗಳ ಪುಣ್ಯಸ್ಮರಣೆ ಕಾರ್ಯ ಕ್ರಮವನ್ನು ಗುರುವಾರ ಮೈಸೂರಿನಲ್ಲಿ ವಿವಿಧ ಸಂಘ-ಸಂಸ್ಥೆಗಳು ನಡೆಸಿದವು. ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಪ್ರಸಾದ ವಿತರಿಸುವ ಮೂಲಕ ಶ್ರೀಗಳಿಗೆ ಗೌರವ ನಮನ ಸಲ್ಲಿಸಿದವು. ಬಂಡೀಪಾಳ್ಯದಲ್ಲಿ: ಬಂಡೀಪಾಳ್ಯ ಎಪಿ ಎಂಸಿ ಯಾರ್ಡ್ನಲ್ಲಿರುವ ತರಕಾರಿ ಮಾರು ಕಟ್ಟೆ ಆವರಣದಲ್ಲಿ ಶ್ರೀಗಳ ಭಾವಚಿತ್ರವನ್ನು ಪೂಜಿಸಿದ ತರಕಾರಿ ವ್ಯಾಪಾರಿಗಳು ಪುಷ್ಪ ನಮನ ಸಲ್ಲಿಸಿದರು. ಬಳಿಕ ಅನ್ನ ಸಂತ ರ್ಪಣೆ ನಡೆಸಲಾಯಿತು. ವರ್ತಕರು,…
ರಾಮನಾಥಪುರದಲ್ಲಿ ಸಿದ್ಧಗಂಗಾ ಶ್ರೀಗಳಿಗೆ ಶ್ರದ್ಧಾಂಜಲಿ
January 24, 2019ರಾಮನಾಥಪುರ: ಅಲ್ಲಮ ಪ್ರಭು ಅವರ ಜ್ಞಾನ, ಬಸವಣ್ಣನವರ ಕಾಯಕ ತತ್ವ, ಸಿದ್ಧರಾಮರ ಸಾಮಾಜಿಕ ಕಳಕಳಿ ಹೊಂದಿದ್ದ ಸಿದ್ಧಗಂಗಾ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರು ಯುಗಪುರುಷ ಎಂದು ರಾಮೇಶ್ವರಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕ ಶ್ರೀನಿ ವಾಸ್ ಅಭಿಪ್ರಾಯಪಟ್ಟರು. ರಾಮನಾಥಪುರದ ರಾಮೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಸಿದ್ಧಗಂಗಾ ಶ್ರೀ ಗಳವರ ಭಾವಚಿತ್ರಕ್ಕೆ ವಿವಿಧ ಸಮಾಜದ ಮುಖಂಡರು ಪುಷ್ಪಾರ್ಚನೆ ಮಾಡಿದ ನಂತರ ಮಾತನಾಡಿದ ಅವರು, ಸಿದ್ಧ ಗಂಗಾ ಶ್ರೀಗಳು ಧರ್ಮಾತೀತವಾಗಿ ಹತ್ತಾರು ಸಾವಿರ ಬಡ ಮಕ್ಕಳಿಗೆ ಶಿಕ್ಷಣವನ್ನು ನೀಡಿ,…
ಕಾಯಕ ಯೋಗಿ ಶಿವನಲ್ಲಿ ಐಕ್ಯ
January 23, 2019ಗುರು ಉದ್ಧಾನ ಶ್ರೀ ಗದ್ದುಗೆ ಸಮೀಪವೇ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಕ್ರಿಯಾ ಸಮಾಧಿ ತುಮಕೂರು: ವಿಶ್ವಚೇತನ, ವಿಶ್ವರತ್ನ, ಕಾಯಕಯೋಗಿ, ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮೀಜಿಗಳ ಯುಗಾಂತ್ಯವಾಗಿದೆ. ಸೋಮವಾರ ಬೆಳಿಗ್ಗೆ 11 ಗಂಟೆ 44 ನಿಮಿಷಕ್ಕೆ ಲಿಂಗೈಕ್ಯರಾದ ಮಹಾನ್ ಮಾನವತಾವಾದಿಗೆ ಕೋಟಿ ಮನಸುಗಳು ಭಾರ ಹೃದಯದಿಂದ ಬೀಳ್ಕೊಡುಗೆ ನೀಡಿದ್ದಾರೆ. ಸಿದ್ಧಗಂಗಾ ಮಠದ ಆವರಣದಲ್ಲಿ ಗುರು ಉದ್ಧಾನ ಶಿವಯೋಗಿಗಳ ಪಕ್ಕದಲ್ಲಿ ಶಿವಕುಮಾರ ಸ್ವಾಮೀಜಿ ಅವರನ್ನು ಗದ್ದುಗೆಯಲ್ಲಿ ಐಕ್ಯಗೊಳಿಸಲಾಗಿದೆ. ಕ್ರಿಯಾ ಸಮಾಧಿ: ಮಂಗಳವಾರ ಸಂಜೆ 4.30ರ ವೇಳೆಗೆ ಆರಂಭವಾದ ಕ್ರಿಯಾ…
ಮೂರೂವರೆ ದಶಕದ ಹಿಂದೆಯೇ ನಿರ್ಮಾಣವಾಗಿತ್ತು ಸಮಾಧಿ ಭವನ
January 23, 2019ತುಮಕೂರು: ಸೋಮವಾರ ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಅವರ ಕ್ರಿಯಾ ಸಮಾಧಿಗೆ ಮೂರು ದಶಕಗಳ ಹಿಂದೆಯೇ ಜಾಗ ನಿಗದಿಯಾಗಿ, ಸಮಾಧಿ ಭವನವನ್ನು ನಿರ್ಮಿಸಲಾಗಿದೆ. 1982ರಲ್ಲೇ ಕಾಯಕ ಯೋಗಿಯ ಸಮಾಧಿಗೆ ಸ್ಥಳ ನಿಗದಿ ಮಾಡಿ ಸುಮಾರು 3 ಕೋಟಿ ರೂ.ಗಳ ವೆಚ್ಚದಲ್ಲಿ ಸಮಾಧಿ ಭವನವನ್ನು ನಿರ್ಮಿಸಲಾಗಿದೆ. ಶ್ರೀ ಮಠದ ಆವರಣದಲ್ಲಿದ್ದ ಆಲದ ಮರ ಕಡಿದು ಭವನ ನಿರ್ಮಿಸಲು ತೀರ್ಮಾನಿಸಲಾಗಿತ್ತು. ಆದರೆ ಶ್ರೀಗಳು ಆಲದಮರ ಕಡಿಯಲು ಒಪ್ಪಲಿಲ್ಲ. ಇದರಿಂದ ಈ ಸ್ಥಳ ನೆನೆಗುದಿಗೆ ಬಿದ್ದಿತು. ವಿಸ್ಮಯ ಎಂಬಂತೆ…
ಭಾರವಾದ ಮನಸ್ಸಿಂದ ಭಕ್ತಸಾಗರದ ಬೀಳ್ಕೊಡುಗೆ
January 23, 2019ಸಿದ್ಧಗಂಗೆ: ಶ್ರೀ ವಿಳಂಬಿನಾಮ ಸಂವತ್ಸರದ ಉತ್ತರಾಯಣ ಪುಣ್ಯಕಾಲ. ಹೇಮಂತ ಋತುವಿನ ಪಾಡ್ಯ ದಿನ. ಮಂಗಳವಾರ ಸಂಜೆ 5ರ ವೇಳೆ. ಪಶ್ಚಿಮ ದಿಗಂತದ ಅಂಚಿನತ್ತ ಸಾಗುತ್ತಿದ್ದ ಸೂರ್ಯ ನಿರ್ಗಮಿಸುವುದನ್ನೂ ಮರೆತು ಭುವಿಯತ್ತ ತಿರುಗಿ ಒಂದೆಡೆ ದಿಟ್ಟಿಸಿ ನೋಡುತ್ತಲೇ ಇದ್ದ. ತುಮಕೂರು ಜಿಲ್ಲೆಯ ಸಿದ್ಧಗಂಗೆಯ ಬೆಟ್ಟದ ಭಾರೀ ಬಂಡೆಗಳು, ಬೃಹತ್ ಕಟ್ಟಡಗಳ ನಡುವೆ ಮತ್ತೊಂದು ಸೂರ್ಯನ ಮೆರವಣಿಗೆ ನಿಧಾನವಾಗಿ ಸಾಗುತ್ತಿತ್ತು. ಬಗೆ ಬಗೆ ಹೂವುಗಳಿಂದ ಅಲಂಕೃತವಾದ ರುದ್ರಾಕ್ಷಿ ರಥದಲ್ಲಿ ಮಂದಸ್ಮಿತರಾಗಿ ಆಸೀನರಾಗಿದ್ದ ಕಾವಿಧಾರಿ ಸೂರ್ಯನ ತೇಜಸ್ಸು ಕಂಡು ರವಿತೇಜನೇ ಬೆರಗಾಗಿದ್ದ!…
ಶಾಂತಿಯುತವಾಗಿ ನಡೆದ ಸಿದ್ಧಗಂಗಾ ಶ್ರೀಗಳ ಅಂತಿಮ ವಿಧಿ ವಿಧಾನ: ಸಿಎಂ ಕೃತಜ್ಞತೆ
January 23, 2019ಬೆಂಗಳೂರು/ ತುಮಕೂರು: ಸಿದ್ಧಗಂಗಾ ಮಠದಲ್ಲಿ ಇಂದು ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ಅಂತಿಮ ಕ್ರಿಯಾ ವಿಧಿಗಳು ಶ್ರದ್ಧಾಪೂರ್ವಕವಾಗಿ ಹಾಗೂ ಶಾಂತಿಯುತವಾಗಿ ನೆರವೇರಿದೆ. ಲಕ್ಷಾಂತರ ಭಕ್ತರು ಶಾಂತಿಯುತವಾಗಿ ಸರತಿಯಲ್ಲಿ ಕಾದು ತ್ರಿವಿಧ ದಾಸೋಹಿಗೆ ಅಂತಿಮ ನಮನಗಳನ್ನು ಅರ್ಪಿಸಿದರು. ಇದಕ್ಕಾಗಿ ಸಹಕರಿಸಿದ ಎಲ್ಲರಿಗೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಜನಸಾಗರವೇ ಹರಿದು ಬಂದರೂ ಎಲ್ಲ ವಿಧಿ ವಿಧಾನಗಳು ಅಚ್ಚುಕಟ್ಟಾಗಿ ನೆರವೇರಿದವು. ಈ ಸಂದರ್ಭದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಸಿದ್ಧತೆ ನಡೆಸಲು ಶ್ರಮಿಸಿದ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್?, ಗೃಹ ಸಚಿವ…
ಕೊಡಗಿನಾದ್ಯಂತ ಸಿದ್ಧಗಂಗಾಶ್ರೀಗಳಿಗೆ ನುಡಿನಮನ ಸಿದ್ಧಗಂಗಾಶ್ರೀ ಕಾಯಕ ನಿಷ್ಠೆಯ ಮಹಾಯೋಗಿ
January 23, 2019ಮಡಿಕೇರಿ: ಶ್ರೀ ಸಿದ್ಧಗಂಗಾ ಕ್ಷೇತ್ರದ ಡಾ.ಶಿವಕುಮಾರ ಸ್ವಾಮೀಜಿಗಳು ತ್ರಿವಿಧ ದಾಸೋಹದ ಕಾಯಕ ನಿಷ್ಠೆಯ ಮೂಲಕ ತಮ್ಮ ಜೀವಿತಾವಧಿಯಲ್ಲಿ ಇಡೀ ಜನಸಮು ದಾಯವನ್ನು ಪ್ರಭಾವಿಸಿದ ಸಿದ್ಧಿ ಪುರುಷ ರಾಗಿದ್ದಾರೆ ಎಂದು ಕಾಯಕ ಯೋಗಿ ಬಗ್ಗೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಕೊಡಗು ಜಿಲ್ಲಾ ಪತ್ರಿಕಾ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾ ವಿದರ ಬಳಗದ ಸಂಯುಕ್ತ ಆಶ್ರಯದಲ್ಲಿ ನಗರದ ಪತ್ರಿಕಾ ಭವನದ ಸಭಾಂಗಣ ದಲ್ಲಿ ನಡೆದ `ಶ್ರದ್ಧಾಂಜಲಿ’ ಸಭೆಯಲ್ಲಿ ನಡೆದಾಡುವ ದೇವರ ಭಾವಚಿತ್ರಕ್ಕೆ ಪುಷ್ಪಾ ರ್ಚನೆ…
ಹಳ್ಳಿಯಿಂದ ಬಂದು ಸೇವೆಯ ಶಿಖರವೇರಿದ ಕಾಯಕ ಯೋಗಿ…
January 22, 2019ಬೆಂಗಳೂರು: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೀರಾಪುರ, ಸಿದ್ಧಗಂಗೆಯ ಮಹಾಯೋಗಿ ಶಿವಕುಮಾರ ಸ್ವಾಮೀಜಿಗಳ ಹುಟ್ಟೂರು. ಶಿವಗಂಗೆಯ ಬೆಟ್ಟದ ತಪ್ಪಲಿನಲ್ಲಿರುವ ಈ ಹಳ್ಳಿಗೆ ನಾಡಿನ ಭೂಪಟದಲ್ಲಿ ವಿಶೇಷ ಸ್ಥಾನಮಾನವಿದೆ. ವೀರಾಪುರದ ಹೊನ್ನೇಗೌಡ, ಗಂಗಮ್ಮ ದಂಪತಿಯ 13 ಮಕ್ಕಳಲ್ಲಿ ಒಬ್ಬರಾದ ಶಿವಣ್ಣ, ಏಪ್ರಿಲ್ 1, 1907 ರಲ್ಲಿ ಜನ್ಮ ತಳೆದರು. ವೀರಾಪುರ, ಪಾಲನಹಳ್ಳಿಯಲ್ಲಿ ಬಾಲ್ಯ ಕಳೆದ ನಂತರ ನಾಗವಲ್ಲಿಯಲ್ಲಿ ಮಾಧ್ಯಮಿಕ ಶಿಕ್ಷಣ. 1919ರಲ್ಲಿ ಕನ್ನಡ ಲೋಯರ್ ಸೆಕೆಂಡರಿ ಪರೀಕ್ಷೆ, 1921ರಲ್ಲಿ ಇಂಗ್ಲೀಷ್ ಲೋಯರ್ ಸೆಕೆಂಡರಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರು. ಅಣ್ಣ…
ಸಿದ್ದಗಂಗಾ ಶ್ರೀಗಳು ಆಸ್ಪತ್ರೆಯಿಂದ ಮಠಕ್ಕೆ ವಾಪಸ್, ಚಿಕಿತ್ಸೆ ಮುಂದುವರಿಕೆ
January 17, 2019ತುಮಕೂರು: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ ಆರೋಗ್ಯ ದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಬುಧವಾರ ಬೆಳಗ್ಗೆ ಮಠಕ್ಕೆ ವಾಪಸ್ ಕರೆತರಲಾಗಿದೆ. ಶ್ವಾಸಕೋಶದ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದಗಂಗಾ ಶ್ರೀಗಳು ಮಠಕ್ಕೆ ಹೋಗಬೇಕೆಂದು ನಿನ್ನೆಯಿಂದ ಹಠ ಹಿಡಿದಿದ್ದರಿಂದ ಇಂದು ಮುಂಜಾನೆ ವೇಳೆಗೆ ಕರೆದುಕೊಂಡು ಬರಲಾಗಿದೆ. ಆಸ್ಪತ್ರೆಯಲ್ಲಿ ನೀಡಲಾಗುತ್ತಿದ್ದ ಚಿಕಿತ್ಸೆಯನ್ನು ಮಠದಲ್ಲಿ ಮುಂದುವರಿಸಲಾಗುವುದು ಎಂದು ಕಿರಿಯ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ. ಸ್ವಾಮೀಜಿಗಳ ಆರೋಗ್ಯದಲ್ಲಿ ಯಾವುದೇ ಏರುಪೇರು ಕಂಡು ಬಂದಿಲ್ಲ. ರಾತ್ರಿ ಯಿಂದ ಮಠಕ್ಕೆ ಹೋಗುವಂತೆ…