ತುಮಕೂರು: ಸಿದ್ದಗಂಗೆಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳು ಹೇಗೆ ತ್ರಿವಿಧ ದಾಸೋಹಕ್ಕೆ ಹೆಸರಾಗಿದ್ದರೋ, ಅವರ ಮಠದ ಪುಟ್ಟ ವಿದ್ಯಾರ್ಥಿಗಳೂ ಅದೇ ಕಾಯಕವನ್ನು ಮುಂದುವರಿಸಿದ್ದಾರೆ. ಶ್ರೀಗಳ ಅಂತಿಮ ದರ್ಶನಕ್ಕೆ ಬಂದ ಎಲ್ಲಾ ಭಕ್ತಾದಿಗಳೂ ನಂತರ ಶ್ರೀ ಮಠದಲ್ಲಿ ಪ್ರಸಾದ ಸ್ವೀಕರಿಸಿಯೇ ತೆರಳಬೇಕು. ಆ ಮೂಲಕ ಶ್ರೀಗಳ ಮನದಾಸೆಯನ್ನು ಪೂರೈಸಬೇಕು ಎಂದು ಮಠದ ಶಿಷ್ಯರು, ಶ್ರೀಗಳ ಅನುಯಾಯಿಗಳು ಭಕ್ತಾದಿಗಳಿಗೆ ಮೈಕ್ ಮೂಲಕ ವಿನಂತಿ ಮಾಡುತ್ತಿದ್ದರು. ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು….
ಮೈಸೂರು
ಹಳ್ಳಿಯಿಂದ ಬಂದು ಸೇವೆಯ ಶಿಖರವೇರಿದ ಕಾಯಕ ಯೋಗಿ…
January 22, 2019ಬೆಂಗಳೂರು: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೀರಾಪುರ, ಸಿದ್ಧಗಂಗೆಯ ಮಹಾಯೋಗಿ ಶಿವಕುಮಾರ ಸ್ವಾಮೀಜಿಗಳ ಹುಟ್ಟೂರು. ಶಿವಗಂಗೆಯ ಬೆಟ್ಟದ ತಪ್ಪಲಿನಲ್ಲಿರುವ ಈ ಹಳ್ಳಿಗೆ ನಾಡಿನ ಭೂಪಟದಲ್ಲಿ ವಿಶೇಷ ಸ್ಥಾನಮಾನವಿದೆ. ವೀರಾಪುರದ ಹೊನ್ನೇಗೌಡ, ಗಂಗಮ್ಮ ದಂಪತಿಯ 13 ಮಕ್ಕಳಲ್ಲಿ ಒಬ್ಬರಾದ ಶಿವಣ್ಣ, ಏಪ್ರಿಲ್ 1, 1907 ರಲ್ಲಿ ಜನ್ಮ ತಳೆದರು. ವೀರಾಪುರ, ಪಾಲನಹಳ್ಳಿಯಲ್ಲಿ ಬಾಲ್ಯ ಕಳೆದ ನಂತರ ನಾಗವಲ್ಲಿಯಲ್ಲಿ ಮಾಧ್ಯಮಿಕ ಶಿಕ್ಷಣ. 1919ರಲ್ಲಿ ಕನ್ನಡ ಲೋಯರ್ ಸೆಕೆಂಡರಿ ಪರೀಕ್ಷೆ, 1921ರಲ್ಲಿ ಇಂಗ್ಲೀಷ್ ಲೋಯರ್ ಸೆಕೆಂಡರಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರು. ಅಣ್ಣ…