ಮೈಸೂರು. ಡಿ.3(ಎಸ್ಬಿಡಿ)- ರಾಜ್ಯದಲ್ಲಿ ಸರ್ಕಾ ರವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಮೂಲಕ ರಾಜ್ಯದ ಜನತೆಗೆ ಕನಕದಾಸರ ಜಯಂತ್ಯೋತ್ಸವದ ಶುಭಾ ಶಯ ತಿಳಿಸಿದ ಅವರು, ಮಾಧ್ಯಮದವರ ನಾನಾ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಈವರೆಗೂ ಸರ್ಕಾರ ಟೇಕ್ ಆಫ್ ಆಗಿಯೇ ಇಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂಬ ಪರಿಸ್ಥಿತಿ ಇದೆ. ಯಡಿಯೂರಪ್ಪ ಅಸಮರ್ಥ ಮುಖ್ಯಮಂತ್ರಿ. ಈ ಹಿಂದೆಯೂ ಸಮರ್ಥವಾಗಿ ಇರಲಿಲ್ಲ, ಈಗಲೂ ಇಲ್ಲ. ತಿಂಗಳ ಹಿಂದೆಯೇ ಹೇಳಿದಂತೆ ಮುಖ್ಯಮಂತ್ರಿ…
ಸಾಹಿತಿಗಳು, ಪ್ರಗತಿಪರರೊಂದಿಗೆ ಸಿದ್ದರಾಮಯ್ಯ ಸಭೆ
December 4, 2020ಮೈಸೂರು,ಡಿ.3- ವಿಧಾನಸಭೆ ವಿರೋಧ ಪಕ್ಷದ ನಾಯಕರೂ ಆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮೈಸೂರಿನಲ್ಲಿ ಪ್ರಗತಿಪರ ಚಿಂತಕರು, ಸಮಾಜವಾದಿ ಹೋರಾಟಗಾರರು, ಪ್ರಾಧ್ಯಾಪಕರು ಹಾಗೂ ಜಾತ್ಯತೀತ ಚಿಂತನೆಯುಳ್ಳ ಸಾಹಿತಿಗಳ ಜೊತೆ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಚರ್ಚೆ ನಡೆಸಿದರು. ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಿರುವುದು ನಿಜ. ಇದೇನೂ ರಹಸ್ಯ ಸಭೆ ಅಲ್ಲ. ಪ್ರಸಕ್ತ ಪರಿಸ್ಥಿತಿಯಲ್ಲಿ ತಳ ಸಮುದಾಯದವರು, ಬಡವರು ಜೀವನ ನಡೆಸಲು ಹೆಣಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಅನಿ ವಾರ್ಯ ಎಂಬ…
ಎಲ್ಲಾ ಗ್ರಾಮಗಳ ಸೇರ್ಪಡೆಗೆ ಸಿದ್ದರಾಮಯ್ಯರಿಗೆ ಮನವಿ
December 4, 2020ಮೈಸೂರು, ಡಿ.3-ಮೈಸೂರು ಸಮೀಪದ ಬೀರಿಹುಂಡಿ ಪಂಚಾಯಿತಿಗೆ ಸೇರಿದ ಎಲ್ಲಾ ಗ್ರಾಮಗಳನ್ನು ಬೋಗಾದಿ ಪಟ್ಟಣ ಪಂಚಾ ಯಿತಿಗೆ ಸೇರಿಸಲು ಸರ್ಕಾರಕ್ಕೆ ಸಲಹೆ ನೀಡು ವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡರ ನೇತೃತ್ವದಲ್ಲಿ ಗುರುವಾರ ಮನವಿ ಸಲ್ಲಿಸಲಾಯಿತು. ಹೊಸದಾಗಿ ರಚನೆ ಯಾಗಿರುವ ಬೋಗಾದಿ ಪಟ್ಟಣ ಪಂಚಾಯಿತಿಗೆ ಬೀರಿಹುಂಡಿ ಪಂಚಾಯಿತಿ ವ್ಯಾಪ್ತಿಗೆ ಬರುವ ಬಡಗಲಹುಂಡಿ, ಕೇರ್ಗಳ್ಳಿ, ಕೆ. ಸಾಲುಂಡಿ, ನಂಜರಾಜಯ್ಯ ನಹುಂಡಿ, ಮನ್ನಹುಂಡಿ ಗ್ರಾಮ ಗಳು ಸೇರ್ಪಡೆಯಾಗುತ್ತವೆ. ಉಳಿದಂತೆ ಬಲ್ಲಹಳ್ಳಿ, ಬೀರಿ ಹುಂಡಿ, ಕುಮಾರಬೀಡು,…
ಬಿಜೆಪಿಯ ಸರ್ಕಸ್ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ
November 22, 2020ಬೆಂಗಳೂರು: ಬಿಜೆಪಿಯ ಸರ್ಕಸ್ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದ್ದು, ಶೀಘ್ರವಾಗಿ ಏನಾ ದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿ ಎಂದು ಸಿದ್ದರಾಮಯ್ಯ ಆಡ ಳಿತಾರೂಢ ಬಿಜೆಪಿಯನ್ನು ಟೀಕಿಸಿದ್ದಾರೆ. ಹಿಂದೆಲ್ಲ ಬಿಜೆಪಿ ನಾಯಕರು, ಹೈಕಮಾಂಡ್ ಸಂಸ್ಕೃತಿ’ ಮೂಲ ನಿವಾಸಿಗಳು-ವಲಸೆ ಗಾರರು’ಕುಟುಂಬ ರಾಜಕಾರಣ’ ಎಂಬಿ ತ್ಯಾದಿ ಪದಗಳನ್ನು ಜೋಡಿಸಿ ಹಗಲು ರಾತ್ರಿ ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದರು. ಈಗ ಅದೇ ಆರೋಪಗಳನ್ನು ಪರಸ್ಪರ ಮಾಡ್ಕೊಂಡು ಬೆತ್ತಲಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ರುವ ಅವರು,…
ಸರ್ವಪಕ್ಷ ನಾಯಕರ ಸಭೆಯಲ್ಲಿ ಸಿದ್ದರಾಮಯ್ಯ ಅವರು ಹೇಳಿದ್ದು
March 30, 2020ಬೆಂಗಳೂರು, ಮಾ.29-ನಮ್ಮ ತಪ್ಪಿನಿಂದ ಯಾವ ನ್ಯೂನತೆ ಆಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ವಿದೇಶದಿಂದ ಬಂದವರ ಆರೋಗ್ಯ ತಪಾಸಣೆ ಸರಿಯಾಗಿ ಆಗುತ್ತಿಲ್ಲ. ಸರ್ಕಾರದ ಮಾಹಿತಿಯೂ ಅಸ್ಪಷ್ಟವಾಗಿದೆ. 23 ಸಾವಿರ ಮಂದಿ ಪೈಕಿ 4.500 ಮಂದಿಯನ್ನು ಇನ್ನೂ ಗುರುತಿಸಬೇಕಿದೆ ಎಂದು ಸರ್ಕಾರ ಹೇಳಿದೆ. ಅವರನ್ನು ಕೂಡಲೇ ಪತ್ತೆ ಮಾಡಬೇಕು. ಮೂರನೇ ಹಂತಕ್ಕೆ ನಾವು ಇನ್ನೂ ಹೋಗಿಲ್ಲ ಎಂದು ಸಚಿವರು ಹೇಳಿದ್ದಾರೆ. ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. ಆದರೆ. ಆತನಿಗೆ ವಿದೇಶದಿಂದ ಬಂದವರ ಸಂಪರ್ಕ ಇರಲಿಲ್ಲ. ಆದರೂ ಕರೋನ…
ಹೈಕಮಾಂಡ್ ಬುಲಾವ್: ಇಂದು ಸಿದ್ದರಾಮಯ್ಯ ದೆಹಲಿಗೆ
January 13, 2020ಬೆಂಗಳೂರು, ಜ.12- ನಿರೀಕ್ಷಿತ ಕೆಪಿಸಿಸಿ ಸಾರಥ್ಯ ಬದಲಾವಣೆ ವಿಚಾರ ಅಂತಿಮ ಘಟ್ಟ ತಲುಪಿದ್ದು, ಇನ್ನೆರಡು ದಿನಗಳಲ್ಲಿಯೇ ಪ್ರದೇಶ ಕಾಂಗ್ರೆಸ್ಗೆ ಹೊಸ ಅಧ್ಯಕ್ಷರ ನೇಮಕಾತಿಯಾಗಲಿದೆ. ರಾಜ್ಯ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರ ಸಂಬಂಧ ಚರ್ಚಿಸಲು ಸೋಮವಾರ ಸಂಜೆ ದೆಹಲಿಗೆ ಬರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಹೈಕಮಾಂಡ್ ಸೂಚನೆ ನೀಡಿದೆ. ಈ ಹಿನ್ನೆಲೆ ಯಲ್ಲಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಅಧ್ಯಕ್ಷರ ನೇಮಕ ಸಂಬಂಧ ದಿಲ್ಲಿಗೆ ಬರಲು ಆಯ್ದ ರಾಜ್ಯ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಮತ್ತೊಂ ದೆಡೆ ಮಾಜಿ ಸಚಿವ…
ಕರ್ನಾಟಕದಲ್ಲಿ ಹಿಟ್ಲರ್ ಆಡಳಿತಕ್ಕೆ ಅವಕಾಶ ಕೊಡಲ್ಲ: ವಿದ್ಯಾರ್ಥಿಗಳ ಮೇಲಿನ ದಾಳಿಗೆ ಸಿದ್ದರಾಮಯ್ಯ ಕಿಡಿ
January 10, 2020ಬೆಂಗಳೂರು: ಶಿಕ್ಷಣ ಸಂಸ್ಥೆಗಳು ಜ್ಞಾನದ ಪ್ರಸಾರ ಕೇಂದ್ರಗಳು, ವಿಮರ್ಶಾತ್ಮಕ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವದ ಮೂಲ ವಾಗಿದೆ. ಬಿಜೆಪಿಯ ಸಿದ್ಧಾಂತವು ಫ್ಯಾಸಿ ಸಂನ ದುರ್ಬಲ ಅಡಿಪಾಯದಲ್ಲಿದೆ. ನಮ್ಮ ವಿಶ್ವವಿದ್ಯಾಲಯಗಳ ಜ್ಞಾನದ ನೆಲೆಯಿಂದ ಬಿಜೆಪಿಗೆ ಬೆದರಿಕೆ ಇದೆ. ಆದ್ದರಿಂದ ಅವು ಗಳನ್ನು ಮಟ್ಟಹಾಕಲು ಮತ್ತು ದುರ್ಬಲ ಗೊಳಿಸಲು ಬಯಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಿಜೆಪಿಯ ಗೂಂಡಾಗಳು ಬೆಂಗಳೂ ರಿನ ಜ್ಯೋತಿನಿವಾಸ್ ಕಾಲೇಜಿನ ವಿದ್ಯಾರ್ಥಿ ಗಳಿಗೆ ಸಿಎಎಗೆ ಬೆಂಬಲ ನೀಡುವಂತೆ ಬೆದ ರಿಕೆ ಹಾಕುತ್ತಿದ್ದಾರೆ. ಯಡಿಯೂರಪ್ಪ ಅವರೇ,…
ಎಳೆ ಮಕ್ಕಳ ಮುಂದೆ ಕೊಳಕು ರಾಜಕೀಯ ಭಾಷಣ ಮಾಡಿದ ಮೋದಿಯನ್ನು ಆ ಪವಿತ್ರ ನೆಲ ಕ್ಷಮಿಸದು: ಸಿದ್ದರಾಮಯ್ಯ
January 3, 2020ಬೆಂಗಳೂರು,ಜ.2- ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನ ಇದೆ. ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ. ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜ ಕೀಯದ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ. ಸನ್ಮಾನ್ಯ ಯಡಿಯೂರಪ್ಪ ಅವರೇ, ನಿಮ್ಮದೇ ಪಕ್ಷದ ಹಿರಿಯ ನಾಯಕರ ಸಾರಥ್ಯದ ಪತ್ರಿಕೆಯಲ್ಲಿ…
ಅಮಿತ್ ಷಾ, ಬಿಎಸ್ವೈ ಅಧಿಕಾರದಲ್ಲಿರಲು ನೈತಿಕ ಹಕ್ಕಿಲ್ಲ
November 9, 2019ಮೈಸೂರು, ನ.8(ಆರ್ಕೆಬಿ)- ಆಪರೇಷನ್ ಕಮಲ ಮಾಡಿ ಅನೈತಿಕವಾಗಿ ಅಧಿಕಾರಕ್ಕೆ ಬಂದಿ ದ್ದಾರೆ. ಅಮಿತ್ ಷಾ ಮತ್ತು ಬಿ.ಎಸ್.ಯಡಿಯೂರಪ್ಪ ಇಬ್ಬರನ್ನೂ ಅಧಿಕಾರದಿಂದ ವಜಾಗೊಳಿಸುವಂತೆ ರಾಷ್ಟ್ರಪತಿಗಳಿಗೆ ದೂರು ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿಗಳ ಸಮಯ ಕೇಳಿದ್ದೇವೆ, ಕೊಟ್ಟರೆ ಭೇಟಿ ಮಾಡುತ್ತೇವೆ. ಯಡಿಯೂರಪ್ಪ ಆಡಿಯೋದಲ್ಲಿ ಎಲ್ಲವನ್ನು ಹೇಳಿದ್ದಾರೆ. ಖುದ್ದು ಅಮಿತ್ ಷಾ ಇದರ ಉಸ್ತುವಾರಿ ವಹಿಸಿದ್ದರು. ಅವರ ಸೂಚನೆಯಂತೆ ನಾನು ಆಪರೇಷನ್ ಕಮಲ ಮಾಡಿದೆ…
ಯತ್ನಾಳ್ ಸತ್ಯ ಹೇಳ್ತಾರೆ, ಅವ್ರು ನನಗೆ ಒಳ್ಳೆ ಸ್ನೇಹಿತ
October 11, 2019ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಧಿವೇಶನದ ಮೊದಲ ದಿನವೇ ಬಿಜೆಪಿ ನಾಯಕರು ಹಾಗೂ ಕೇಂದ್ರ ಸರ್ಕಾ ರದ ವಿರುದ್ಧ ಭರ್ಜರಿ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಮಾತಿನ ಧಾಟಿಯ ಮೂಲಕವೇ ಬಿಜೆಪಿಯಲ್ಲಿ ಕಾಣಿಸಿಕೊಂಡ ಭಿನ್ನ ಮತ ಹಾಗೂ ಅಸಮಾಧಾನವನ್ನು ಕೆಣಕಿದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸತ್ಯ ಹೇಳುತ್ತಾರೆ. ಅವರು ನನಗೆ ಒಳ್ಳೆ ಸ್ನೇಹಿತ. ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರನ್ನು ಅಧಿಕಾರದಿಂದ ತೆಗೆಯುವುದಕ್ಕೆ ಇಬ್ಬರು ಕೇಂದ್ರ ಸಚಿವರು ಹೊರಟಿದ್ದಾರೆ ಅಂತ ಯತ್ನಾಳ್ ಹೇಳಿದ್ದಾರೆ. ಪಾಪ ಯತ್ನಾಳ್…