ಮೈಸೂರು: ರಾಜಕೀಯ ಪ್ರೇರಿತವಾಗಿ ಭೂ ಹಗರಣ ಪ್ರಕರಣವೊಂದರ ಎಫ್ಐಆರ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಉದ್ದೇಶಪೂರ್ವಕವಾಗಿ ಸೇರಿಸಲಾಗಿದ್ದು, ಕೂಡಲೆ ಸಿದ್ದರಾಮಯ್ಯ ಅವರ ಹೆಸರನ್ನು ಕೈಬಿಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ ರಾಜ್ಯಾಧ್ಯಕ್ಷ ಕೆ.ಸಿ.ಪುಟ್ಟರಂಗಶೆಟ್ಟಿ ಎಚ್ಚರಿಸಿದ್ದಾರೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ತೇಜೋವಧೆಗೆ ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕರು ವ್ಯವಸ್ಥಿತ ಷಡ್ಯಂತರ ನಡೆಸುತ್ತಿದ್ದಾರೆ. 21 ವರ್ಷದ ನಂತರ ಆರ್ಟಿಐ ಕಾರ್ಯಕರ್ತರೊಬ್ಬರು ಕೆಲ ಪ್ರಭಾವಿ ರಾಜಕಾರಣಿಗಳಿಂದಾಗಿ…
ನಿವೇಶನ ಖರೀದಿ, ಪರಭಾರೆ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರ ವಿರುದ್ಧ ಎಫ್ಐಆರ್
June 24, 2018ಮೈಸೂರು: ಮುಡಾ ನಿವೇಶನ ಖರೀದಿ ಹಾಗೂ ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ ತಿಳಿಸಿದ್ದಾರೆ. ಮೈಸೂರಿನ 2 ನೇ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಮಾಜಿ ಸಿಎಂ ಸಿದ್ದ ರಾಮಯ್ಯ, ಮುಡಾ ಮಾಜಿ ಅಧ್ಯಕ್ಷರಾದ ಸಿ. ಬಸವೇಗೌಡ, ಡಿ.ಧ್ರುವಕುಮಾರ್, ಆಯುಕ್ತ ಕಾಂತರಾಜು ವಿರುದ್ಧ, ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (ಸಂಖ್ಯೆ 0049/2018) ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ….
ಅಡಿಗಡಿಗೆ ಸಿದ್ದರಾಮಯ್ಯ ಅಡ್ಡಗಾಲು
June 19, 2018ರಾಹುಲ್ ಗಾಂಧಿಗೆ ದೂರು ಸಲ್ಲಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅತೃಪ್ತರ ಪ್ರತಿಭಟನೆ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ ಎಂದು ವಿವರ ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಟಕವಾಗಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿಗೆ ದೂರು ನೀಡಿದ್ದಾರೆ. ದೆಹಲಿಯಲ್ಲಿಂದು ರಾಹುಲ್ ಭೇಟಿ ಮಾಡಿ, ಸುಮಾರು 30 ನಿಮಿಷಗಳಿಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿ, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ಮಾಡಿದ್ದಲ್ಲದೆ, ಸಿದ್ದರಾಮಯ್ಯ ಪರೋಕ್ಷ ವಾಗಿ ಸರ್ಕಾರದ ವಿರುದ್ಧ ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು…
ಆಡಳಿತದಲ್ಲಿ ಹಸ್ತಕ್ಷೇಪ ಮಾಡಲ್ಲ
June 17, 2018ರಾಜ್ಯ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಮಾಜಿ ಸಿಎಂ ಸಿದ್ದರಾಮಯ್ಯ ಕುಮಾರಸ್ವಾಮಿ ‘ಟಚ್’ ಹೇಳಿಕೆ ಅರ್ಥ ಗೊತ್ತಿಲ್ಲ ಮತ್ತೊಂದು ಬಜೆಟ್ನ ಅವಶ್ಯಕತೆ ಇಲ್ಲ ಬೆಂಗಳೂರು: ಸರ್ಕಾರದ ಆಡಳಿತಾತ್ಮಕ ವಿಷಯ ದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ತಾವು ಮಂಡಿಸಿರುವ 2018-19ನೇ ಸಾಲಿನ ಮುಂಗಡ ಪತ್ರದಲ್ಲಿ ಸಾಕಷ್ಟು ಜನಪರ ಕಾರ್ಯಕ್ರಮಗಳಿದ್ದು, ಅವುಗಳನ್ನೇ ಮುಂದುವರೆಸಬೇಕು. ಒಂದು ವರ್ಷ ನನ್ನನ್ನು ಯಾರೂ…
ಸಿದ್ದರಾಮಯ್ಯ ನೇತೃತ್ವದಲ್ಲಿ ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ನಲ್ಲಿ ಗೆದ್ದವರು, ಸೋತವರ ಆತ್ಮಾವಲೋಕನಾ ಸಭೆ
June 14, 2018ಮೈಸೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಜ್ಜುಗೊಳಿಸುವ ಸಂಬಂಧ ಬುಧವಾರ ಮಾಜಿ ಮುಖ್ಯಮಂತ್ರಿ, ರಾಜ್ಯ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ರಹಸ್ಯ ಸಭೆ ನಡೆಸಿ, ಚರ್ಚಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದವರು ಮತ್ತು ಸೋತವರ ಸಭೆಯಲ್ಲಿ ಮೈಸೂರು ಜಿಲ್ಲೆಯಿಂದ ಗೆಲುವು ಸಾಧಿಸಿದ ಕಾಂಗ್ರೆಸ್ ಶಾಸಕರಾದ ತನ್ವೀರ್ಸೇಠ್, ಡಾ.ಯತೀಂದ್ರ, ಅನಿಲ್ ಚಿಕ್ಕಮಾಧು, ಸೋತ ವಾಸು, ಎಂ.ಕೆ.ಸೋಮಶೇಖರ್, ಕೆ.ವೆಂಕಟೇಶ್, ಹೆಚ್.ಪಿ.ಮಂಜುನಾಥ್, ಕಳಲೆ ಕೇಶವಮೂರ್ತಿ, ರವಿಶಂಕರ್, ಸಂಸದ ಆರ್.ಧ್ರುವನಾರಾಯಣ್, ಮುಖಂಡ…
ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಲಿರುವ ಸಿದ್ದರಾಮಯ್ಯ
June 14, 2018ಮೈಸೂರು: ಮಾಜಿ ಮುಖ್ಯಮಂತ್ರಿ, ರಾಜ್ಯ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಜೂ.16ರಂದು ದಾಖಲಾಗಲಿದ್ದಾರೆ. ಸಿದ್ದರಾಮಯ್ಯನವರು ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗುವ ಸುದ್ದಿ ತಿಳಿಯುತ್ತಿದ್ದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ದೂರವಾಣಿ ಮೂಲಕ ಸಿದ್ದರಾಮಯ್ಯರನ್ನು ಸಂಪರ್ಕಿಸಿ, ಮಾತುಕತೆ ನಡೆಸಿದರು. ಚುನಾವಣೆಯ ಬಳಿಕ ಚಿಕಿತ್ಸೆ ಪಡೆಯುವ ನಿರ್ಧಾರ ಮಾಡಿದ್ದೆ. ಈ ಹಿನ್ನೆಲೆಯಲ್ಲಿ ಬರುತ್ತಿದ್ದೇನೆ. 10ರಿಂದ 12 ದಿನಗಳ ಕಾಲ ಚಿಕಿತ್ಸಾ ಕೇಂದ್ರದಲ್ಲಿ ದಾಖಲಾಗುತ್ತೇನೆಂದು ಸಿದ್ದರಾಮಯ್ಯ, ಹೆಗ್ಗಡೆಯವರಿಗೆ ತಿಳಿಸಿದರು. ಈ ಹಿಂದೆಯೂ ಹಲವಾರು…
ಇಷ್ಟೆಲ್ಲಾ ಕೆಲಸ ಮಾಡಿದ್ದರೂ ಜನ ಮನ್ನಿಸಲಿಲ್ಲವೇಕೆ?
June 13, 2018ವರುಣಾ ಕೃತಜ್ಞತಾ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೇಸರದ ನುಡಿ ಮೈಸೂರು: ದೇಶದ ಯಾವ ರಾಜ್ಯದಲ್ಲೂ ಇಲ್ಲದ `ಅನ್ನಭಾಗ್ಯ’ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿ, ನನ್ನ ಆಡಳಿತಾ ವಧಿಯಲ್ಲಿ ಒಂದು ಕಪ್ಪುಚುಕ್ಕೆಯೂ ಇಲ್ಲದಂತೆ, ಭ್ರಷ್ಟಾಚಾರ, ಹಗರಣಗಳಿಲ್ಲದೇ ಆಡಳಿತ ನಡೆಸಿದ್ದೇವೆ. ರಾಜ್ಯದ ಜನರು ಆಶೀರ್ವಾದ ಮಾಡೇ ಮಾಡುತ್ತಾರೆಂಬ ವಿಶ್ವಾಸವಿತ್ತು. ಆದರೆ ಇಷ್ಟೆಲ್ಲಾ ಜನಪರ ಕಾರ್ಯಕ್ರಮಗಳನ್ನು ನೀಡಿದ್ದರೂ ರಾಜ್ಯದ ಜನತೆ ಮನ್ನಿಸಲಿಲ್ಲವೇಕೆ? ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೇಸರದ ನುಡಿ ಇದು. ಮೈಸೂರಿನ ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ…
ಡಾ.ಯತೀಂದ್ರಗೆ ಹೆಚ್ಚು ಅಂತರದ ಗೆಲುವು; ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ದುಪ್ಪಟ್ಟು ಕೃತಜ್ಞತೆ
June 13, 2018ಮೈಸೂರು: ಶಾಸಕ ಡಾ.ಯತೀಂದ್ರ ಅವರನ್ನು ದೊಡ್ಡ ಬಹುಮತದಿಂದ ಆಯ್ಕೆ ಮಾಡಿರುವ ವರುಣಾ ಕ್ಷೇತ್ರದ ಮತದಾರರು ಮತ್ತು ಪಕ್ಷದ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಇಂದಿಲ್ಲಿ ಕೃತಜ್ಞತೆ ಸಲ್ಲಿಸಿದರು. ನಿಮ್ಮೆಲ್ಲರ ಪರಿಶ್ರಮದಿಂದ ಈ ಅಭೂತಪೂರ್ವ ಗೆಲುವು ಸಾಧ್ಯವಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಬಹುಮತದಿಂದ ಆಯ್ಕೆಯಾಗಿರುವ ಅಖಂಡ ಶ್ರೀನಿವಾಸಮೂರ್ತಿ, ಡಿ.ಕೆ.ಶಿವಕುಮಾರ್ ಅವರೊಂದಿಗೆ ಡಾ.ಯತೀಂದ್ರ ಕೂಡ ಸೇರಿದ್ದಾರೆ. ಇದೇ ಕ್ಷೇತ್ರದಲ್ಲಿ ನನಗೆ 30 ಸಾವಿರ ಅಂತರದಲ್ಲಿ ಗೆಲುವು ನೀಡಿದ್ದ ಕ್ಷೇತ್ರದ ಮತದಾರರು ಡಾ.ಯತೀಂದ್ರಗೆ 2 ಪಟ್ಟು ಅಂದರೆ 58 ಸಾವಿರ ಅಂತರದಲ್ಲಿ…
ಮೈಸೂರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ
June 13, 2018ಮೈಸೂರು: ಮಾಜಿ ಮುಖ್ಯಮಂತ್ರಿ, ಆಡಳಿತ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಮೈಸೂರಿಗೆ ಆಗಮಿಸಿದ್ದು, ಚುನಾವಣೆಯ ಒಂದು ತಿಂಗಳ ಬಳಿಕ ಟಿ.ಕೆ.ಲೇಔಟ್ನಲ್ಲಿ ರುವ ತಮ್ಮ ಮನೆಗೆ ಆಗಮಿಸಿದ ಅವರಿಗೆ ಮನೆಯ ಬಳಿ ಕೆಲ ಕಾಂಗ್ರೆಸ್ ಮುಖಂಡರು ಬರಮಾಡಿಕೊಂಡರು. ಅವರು ಸಿಎಂ ಆಗಿದ್ದಾಗ ಪಕ್ಷದ ಮುಖಂಡರು, ಕಾರ್ಯಕರ್ತರಿಂದ ಭಾರೀ ಜನಜಂಗುಳಿಯಿಂದ ತುಂಬಿರುತ್ತಿದ್ದ ಅವರ ಮನೆಯಲ್ಲಿ ಈಗ ಕೆಲವೇ ಮುಖಂಡರು ಕಂಡು ಬಂದರು. ಅವರ ಪುತ್ರ ಶಾಸಕ ಡಾ.ಯತೀಂದ್ರ, ಮಾಜಿ ಶಾಸಕರಾದ ಸತ್ಯ ನಾರಾಯಣ, ಬನ್ನೂರು ಕೃಷ್ಣಪ್ಪ ಇನ್ನಿ ತರರು ಸಿದ್ದರಾಮಯ್ಯರನ್ನು…
ಕಾಂಗ್ರೆಸ್ನಲ್ಲಿ ಅತೃಪ್ತರೇ ಇಲ್ಲ… ಎಲ್ಲರೂ ತೃಪ್ತರಿದ್ದಾರೆ: ಸಿದ್ದರಾಮಯ್ಯ ಪ್ರತಿಪಾದನೆ
June 13, 2018ಮೈಸೂರು: ಕಾಂಗ್ರೆಸ್ನಲ್ಲಿ ಅತೃಪ್ತರೇ ಇಲ್ಲ. ಎಲ್ಲರೂ ತೃಪ್ತರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಆಡಳಿತ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆ ಬಳಿಕ ಒಂದು ತಿಂಗಳ ನಂತರ ಮಂಗಳವಾರ ಮೈಸೂರಿಗೆ ಭೇಟಿ ನೀಡಿದ ಅವರು, ತಮ್ಮ ಮನೆಯ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಎಂ.ಬಿ.ಪಾಟೀಲ್, ಬಿ.ಸಿ.ಪಾಟೀಲ್, ಸುಧಾಕರ್, ಸಂಗಮೇಶ, ಈಶ್ವರ ಖಂಡ್ರೆ, ಎಸ್.ಆರ್.ಪಾಟೀಲ್ ಇನ್ನಿತರರ ಜೊತೆಗೆ ಮಾತನಾಡಿದ್ದೇನೆ. ಅವರೆಲ್ಲಾ ತೃಪ್ತರಾಗಿದ್ದಾರೆ ಎಂದರು. ರಾಜ್ಯದ ಜನರು ಐದು ವರ್ಷಗಳಿಗೆಂದು ತೀರ್ಪು ನೀಡಿದ್ದಾರೆ. ಅದರಂತೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಐದು ವರ್ಷ…