ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಹಾಗೂ ಇತರೆ ವಾಹನಗಳ ನಡುವೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ 5 ವಾಹನಗಳು ಜಖಂಗೊಂಡಿವೆ. ಅಪಘಾತದ ಆಘಾತದಿಂದಾಗಿ ಮಾಜಿ ಮುಖ್ಯಮಂತ್ರಿಗಳ ಬೆಂಗಾವಲು ವಾಹನದಲ್ಲಿದ್ದ ಜಿಲ್ಲಾ ಸಶಸ್ತ್ರ ಪಡೆಯ ಸಬ್ ಇನ್ಸ್ಪೆಕ್ಟರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣ ಬೆಳೆಸಿದ್ದರು. ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆ ಯುವುದನ್ನು ತಪ್ಪಿಸಲು ಸಿದ್ದರಾಮಯ್ಯ ಅವರ ಪೈಲಟ್ ವಾಹನ…
ಮೇಲ್ವರ್ಗದ ಶೇ.10 ಮೀಸಲಾತಿಗೆ ಕಾಂಗ್ರೆಸ್ ಸ್ವಾಗತ
January 10, 2019ಮೈಸೂರು: ಕಾಂಗ್ರೆಸ್ ಎಂದಿಗೂ ಸಾಮಾಜಿಕ ನ್ಯಾಯದ ಪರವಿದೆ. ಕೇಂದ್ರ ಸರ್ಕಾರ ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದಿರುವವರಿಗಾಗಿ ಶೇ.10 ರಷ್ಟು ಮೀಸಲಾತಿ ತಂದಿರುವುದನ್ನು ಸ್ವಾಗತಿ ಸುತ್ತೇವೆ. ಆದರೆ ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದು ನಾಲ್ಕು ವರ್ಷ, ಎಂಟು ತಿಂಗಳ ನಂತರ ಮೇಲ್ವರ್ಗದ ಮೀಸಲಾತಿ ಪ್ರಸ್ತಾಪ ಮಾಡಿರುವುದು ಚುನಾವಣಾ ಸ್ಟಂಟ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದ ಬಳಿ ಬುಧವಾರ ಮಧ್ಯಾಹ್ನ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಎಂದಿಗೂ ಮೀಸಲಾತಿಯನ್ನು ವಿರೋಧಿಸುವುದಿಲ್ಲ. ನಾವು ಸದಾ…
ಪ್ರಧಾನಿ ಮೋದಿ ರೈತ ವಿರೋಧಿ: ಸಿದ್ದರಾಮಯ್ಯ ಕಟು ಟೀಕೆ
January 1, 2019ಮೈಸೂರು,ಡಿ.31(ಎಂಟಿವೈ)- ಪ್ರಧಾನಿ ನರೇಂದ್ರ ಮೋದಿ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ಕೃಷಿ ಸಾಲಮನ್ನಾ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ತಮ್ಮ ನಿವಾಸದ ಬಳಿ ಸೋಮವಾರ ಪತ್ರ ಕರ್ತರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಆರಂಭದ ದಿನದಿಂದಲೂ ಕೃಷಿ ವಲಯ ಹಾಗೂ ರೈತ ವಿರೋಧಿ ನೀತಿ ತಾಳುತ್ತಿದ್ದಾರೆ. ಕೇವಲ ಭಾಷಣದ ಮೂಲಕ ರೈತರ ಮೂಗಿಗೆ ತುಪ್ಪ ಸವರುತ್ತಿದ್ದಾರೆ ಎಂದು ಆರೋಪಿಸಿದರು. ನಾನು…
ಸಿದ್ದರಾಮಯ್ಯರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿ
December 30, 2018ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಅವರ ಆಪ್ತ ವಲಯದ ಸಚಿವರುಗಳಾದ ಕೆ.ಜೆ. ಜಾರ್ಜ್, ಕೃಷ್ಣಬೈರೇ ಗೌಡ, ಜಮೀರ್ ಅಹಮದ್ ಖಾನ್ ಸೇರಿ ದಂತೆ ಕೆಲವು ಮಂತ್ರಿಗಳ ನಿಯೋಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದೆ. ಆದರೆ ಸ್ವತಃ ಸಿದ್ದರಾಮಯ್ಯ, ಸರ್ಕಾರಕ್ಕಾಗಲೀ, ಮುಖ್ಯಮಂತ್ರಿ ಅವರಿಗಾಗಲೀ ತಮಗೆ ಸ್ಥಾನಮಾನ ಕೋರಿ ಪತ್ರವನ್ನೂ ಬರೆದಿಲ್ಲ, ಮೌಖಿಕವಾಗಿಯೂ ಮನವಿ ಮಾಡಿಲ್ಲ. ಸಚಿವ ಜಾರ್ಜ್ ಮಾತ್ರ ಪದೇ ಪದೆ ಮುಖ್ಯಮಂತ್ರಿ ಅವರನ್ನು ಭೇಟಿ…
ಮೈತ್ರಿ ಸರ್ಕಾರದ ವಿರುದ್ಧ ಮಿತ್ರ ಶಾಸಕರ ಆಕ್ರೋಶ
December 19, 2018ಬೆಳಗಾವಿ: ಸಮ್ಮಿಶ್ರ ಸರ್ಕಾರದಿಂದ ಉತ್ತರ ಕರ್ನಾಟಕ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅನ್ಯಾಯವಾಗುತ್ತಿದೆ ಎಂಬ ಗುರುತರ ಆರೋಪ ಇಂದಿಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಲವರಿಂದ ವ್ಯಕ್ತವಾಯಿತು. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಶಾಸಕರಿಂದ ಅಸಮಾಧಾನಗಳ ಸುರಿಮಳೆಯಾಯಿತು. ಅಸಮಾಧಾನ ಹೊರ ಹಾಕಿದ ಶಾಸಕ ಕೆ.ಸಿ.ಕೊಂಡಯ್ಯ, ಸಂಪುಟದಲ್ಲಿ ಸ್ಥಾನ ನೀಡಿಕೆ ಹಾಗೂ ಉತ್ತರ ಕರ್ನಾಟಕ ಭಾಗದ ಶಾಸಕರ ಮನವಿಗಳಿಗೆ ಬೆಲೆ ಸಿಗುತ್ತಿಲ್ಲ, ಅನು ದಾನ ನೀಡಿಕೆಯಲ್ಲೂ ತಾರತಮ್ಯ ಮಾಡಲಾಗುತ್ತಿದೆ ಎಂದು…
ಮಾಜಿ ಸಿಎಂ ಸಿದ್ದರಾಮಯ್ಯ ಪ್ರಕರಣಕ್ಕೆ `ಬಿ’ ರಿಪೋರ್ಟ್ ಸಲ್ಲಿಸಿದ ಪೊಲೀಸರು
December 13, 2018ಮೈಸೂರು: ಭೂ ಪರಿವರ್ತನೆಯಾಗದ ಕೃಷಿ ಭೂಮಿಯಲ್ಲಿ ನಿಯಮಬಾಹಿರವಾಗಿ ಮನೆ ನಿರ್ಮಾಣ ಮಾಡಿರುವ ಆರೋಪ ದಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ `ಬಿ’ ರಿಪೋರ್ಟ್ ಸಲ್ಲಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್, ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣದಲ್ಲಿ ಯಾವುದೇ ಸತ್ಯಾಂಶವಿಲ್ಲ, ತಪ್ಪು ಗ್ರಹಿಕೆಯಿಂದ ದೂರು ನೀಡಲಾಗಿದೆ ಎಂಬುದು ತನಿಖೆಯಲ್ಲಿ ತಿಳಿದುಬಂದ ಹಿನ್ನೆಲೆಯಲ್ಲಿ ಈ ಸಂಬಂಧ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ದೂರುದಾರ ಗಂಗರಾಜು, ಪೊಲೀಸರು…
ಚಾಮರಾಜನಗರದಲ್ಲಿ ನಳಂದ ವಿವಿ ಕಟ್ಟಡಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
December 9, 2018ಚಾಮರಾಜನಗರ: ಜಿಲ್ಲಾ ಕೇಂದ್ರ ಚಾಮರಾಜನಗರ ಸಮೀಪದ ಯಡಬೆಟ್ಟದಲ್ಲಿ ನಳಂದ ವಿಶ್ವವಿದ್ಯಾನಿಲಯ, ನಳಂದ ಜ್ಞಾನ ಮತ್ತು ಅಧ್ಯಯನ ಕೇಂದ್ರ ಕಟ್ಟಡಕ್ಕೆ ಇಂದು ಮಾಜಿ ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ವೇದಿಕೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಇತಿಹಾಸದೊಂದಿಗೆ ಗತಿಸಿ ಹೋಗಿದ್ದ 12ನೇ ಶತಮಾನದ ನಳಂದ ವಿಶ್ವವಿದ್ಯಾಲಯಕ್ಕೆ ಇಂದು ಪುನರ್ಜನ್ಮ ನೀಡಿದ್ದು, ಈ ದಿನ ಚರಿತ್ರಾರ್ಹ ದಿನವಾಗಿದೆ. ಮಾತ್ರವಲ್ಲ ಇದೊಂದು ಚಾರಿತ್ರಾರ್ಹ ಕಾರ್ಯಕ್ರಮ ಎಂದರು. ಸಮಾಜದಲ್ಲಿ ಅಂದು ಇದ್ದ ಅಸಮಾನತೆ, ಶೋಷಣೆ,…
ಧರ್ಮದ ಬಗ್ಗೆ ಇನ್ನು ಮುಂದೆ ಎಚ್ಚರ ವಹಿಸುವೆ…
December 9, 2018ಚಾಮರಾಜನಗರ: ವೀರಶೈವ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ನನ್ನ ವಿರುದ್ಧ ಅಪಪ್ರಚಾರ ಮಾಡಲಾಯಿತು. ಹೀಗಾಗಿ ನಾನು ಈಗ ಧರ್ಮದ ಬಗ್ಗೆ ಬಹಳ ಎಚ್ಚರಿಕೆ ಯಿಂದ ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವೀರಶೈವ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮದಲ್ಲಿ ಉಂಟಾದ ಗೊಂದಲವನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ ವೀರಶೈವ-ಲಿಂಗಾಯತರಲ್ಲಿಗುರುಪರಂಪರೆ ಮತ್ತು ವಿರಕ್ತ ಪರಂಪರೆ ಎಂದು ಎರಡು ವಿಧ ಇದೆ. ಅದರಲ್ಲಿ ಒಂದು ವಿಧದವರು ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಎಂದು ಘೋಷಿಸಬೇಕು ಎಂದು ನನಗೆ ಮನವಿ ಸಲ್ಲಿಸಿದ್ದರು….
ಮೂಲೆಗುಂಪಾಗುವ ಭೀತಿಯಿಂದ ಸಿಎಂ ಆಗಲು ಯಡಿಯೂರಪ್ಪ ತರಾತುರಿ
December 9, 2018ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆ ಒಳಗೆ ಮುಖ್ಯಮಂತ್ರಿ ಹುದ್ದೆಗೇರದಿದ್ದರೆ ರಾಜ ಕೀಯವಾಗಿ ಮೂಲೆಗುಂಪು ಆಗುತ್ತೇನೆಂಬ ಕಾರಣದಿಂದ ಅನ್ಯ ಪಕ್ಷಗಳ ಶಾಸಕರನ್ನು ಖರೀದಿಸಿ ಅಧಿಕಾರ ಹಿಡಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊರಟಿದ್ದು, ಇದರಲ್ಲಿ ಅವರು ಸಫಲರಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯ ಮಂತ್ರಿ ಆಗದಿದ್ದರೆ, ಪಕ್ಷ ನನ್ನನ್ನು ನಗಣ್ಯ ಮಾಡುತ್ತದೆ ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಆಗಲು ಹರ ಸಾಹಸ ಮಾಡುತ್ತಿದ್ದಾರೆ ಎಂದರು. ವಯಸ್ಸಾಯಿತು, ಚುನಾವಣೆ ಮುಗಿದರೆ ನನ್ನನ್ನು ಯಾರೂ ರಾಜಕೀಯವಾಗಿ…
ಶೀಘ್ರ ಸಚಿವ ಸಂಪುಟ ವಿಸ್ತರಣೆ
November 19, 2018ಹುಬ್ಬಳ್ಳಿ: ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿ ರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಶೀಘ್ರವೇ ನಡೆ ಯಲಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂ ದಿಗೆ ಚರ್ಚಿಸಲಾಗಿದೆ. ಐದು ರಾಜ್ಯ ಗಳ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತೊಡ ಗಿಸಿಕೊಂಡಿರುವುದರಿಂದ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಸಮಯ ಸಿಗುತ್ತಿಲ್ಲ. ಅವರ ಭೇಟಿಗೆ ಸಮಯ…