ಬೆಂಗಳೂರು: ‘ಟಿಪ್ಪು ವಿರೋಧಿಗಳಿಗೆ ನಿಜವಾದ ಟಿಪ್ಪು ಸುಲ್ತಾನ್ ಕಾಣಬೇಕಾದರೆ ಕೋಮುವಾದದ ಕನ್ನಡಕ ಕಳಚಿಟ್ಟು ನೋಡಬೇಕಾಗುತ್ತದೆ ಎಂದು ಬಿಜೆಪಿ ನಾಯಕರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ. ಟಿಪ್ಪು ಸುಲ್ತಾನ್ನ ಅಪ್ರತಿಮ ಸೇವೆಯನ್ನು ಕೊಂಡಾಡಿ ರುವ ಅವರು ಟ್ವೀಟ್ ಮೂಲಕ ಮತ್ತು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಯಂತಿ ವಿರೋಧಿ ಸುತ್ತಿರುವ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ದಲ್ಲಿ ಅವರು ಪ್ರಕಟಿಸಿದ ಪುಸ್ತಕವನ್ನು ಬಿಜೆಪಿ ನಾಯಕರು ಓದಿದರೆ ತಿಳಿಯುತ್ತದೆ. ಅಷ್ಟೇ ಏಕೆ ಶೆಟ್ಟರ್…
ಸಾಮಾಜಿಕ ನ್ಯಾಯದ ಪರವಾಗಿರುವವರನ್ನೇ ಬೆಂಬಲಿಸಿ
November 11, 2018ಮೈಸೂರು: ಕಾಯಕ ಹಾಗೂ ಶೋಷಿತ ಸಮುದಾಯದವರು, ಯಾರು ಸಾಮಾಜಿಕ ನ್ಯಾಯದ ಪರ-ವಿರುದ್ಧ ಇದ್ದಾರೆ ಎನ್ನುವುದನ್ನು ಚಿಂತಿಸಿ, ಪರ ಇದ್ದವರ ಬೆನ್ನಿಗೆ ನಿಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು. ಮೈಸೂರಿನ ಪುರಭವನದ ಆವರಣದಲ್ಲಿ ಜಿಲ್ಲಾ ಕಾಯಕ ಸಮಾಜಗಳ ಒಕ್ಕೂ ಟದ ಉದ್ಘಾಟನಾ ಸಮಾರಂಭದಲ್ಲಿ ಮಾತ ನಾಡಿದ ಅವರು, ಕೆಲವರು ಸ್ವಾರ್ಥಕ್ಕಾಗಿ ಶೋಷಿತರು ಹಾಗೂ ಕಾಯಕ ಸಮಾಜ ಗಳ ವಿರುದ್ಧ ಷಡ್ಯಂತ್ರ ಹೆಣೆಯುತ್ತಾ ಬಂದಿದ್ದಾರೆ. ರಾಜಕೀಯ ಲಾಭಕ್ಕಾಗಿ ಕೇವಲ ಕಾಯಕ ಸಮಾಜದ ಪರವಾಗಿರುವುದಾಗಿ ಮೊಸಳೆ ಕಣ್ಣೀರು ಸುರಿಸಿ…
ನೋಟ್ ಬ್ಯಾನ್ಗೆ 2 ವರ್ಷ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
November 10, 2018ಬೆಂಗಳೂರು: ನೋಟ್ ಬ್ಯಾನ್ ಮಾಡಿ ಎರಡು ವರ್ಷ ಪೂರ್ಣ ಗೊಂಡರೂ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ‘ನೋಟ್ ಬ್ಯಾನ್ನಿಂದಾಗಿ ನೂರಾರು ಜನ ಸಾವ ನ್ನಪ್ಪಿದ್ದಾರೆ. ಸಹಸ್ರಾರು ಮಂದಿ ಸಂಕಷ್ಟಕ್ಕೊಳಗಾಗಿದ್ದಾರೆ. ವಿವಾಹಗಳು ಮುರಿದು ಬಿದ್ದಿವೆ, ರೋಗಿಗಳು ಸಾವನ್ನಪ್ಪಿ ದ್ದಾರೆ. ಹಣ ಕಟ್ಟಲಾಗದೆ ವಿದ್ಯಾರ್ಥಿಗಳು ಶಾಲೆಯಿಂದ ಹೊರ ಬಿದ್ದಿದ್ದಾರೆ. ವ್ಯಾಪಾರ ನಿಂತು ಹೋಗಿದೆ, ಹಸಿವಿನಿಂದ ಜನ ಕಂಗೆಟ್ಟಿದ್ದಾರೆ. ಅಲ್ಲದೆ ಹಲವರು ಉದ್ಯೋಗವನ್ನೇ ಕಳೆದುಕೊಳ್ಳುವಂತಾಯ್ತು. ರೈತರ ಬದುಕು ಛಿದ್ರವಾಯ್ತು,…
ಸಿದ್ದರಾಮಯ್ಯ ಸೊಸೆ ಒಡೆತನದ ಪಬ್ ಮೇಲೆ ಸಿಸಿಬಿ, ಅಬಕಾರಿ ಅಧಿಕಾರಿಗಳ ದಾಳಿ
November 10, 2018ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೊಸೆ ಒಡೆತನದ ಪಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರ ಪುತ್ರ ದಿ. ರಾಕೇಶ್ ಸಿದ್ದರಾಮಯ್ಯ ಅವರ ಪತ್ನಿ ಸ್ಮಿತಾ ಒಡೆತನದ ಪಬ್ ಮೇಲೆ ಸಿಸಿಬಿ ಪೊಲೀಸರು, ಅಬಕಾರಿ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಬೀಗ ಜಡಿದಿದ್ದಾರೆ. ಲೀ ಮೆರಿಡಿಯನ್ ಹೋಟೆಲ್ನಲ್ಲಿ ಸ್ಮಿತಾ ಅವರು ‘ಮೈ ಶುಗರ್ ಫ್ಯಾಕ್ಟರಿ’ ಎಂಬ ಪಬ್ ನಡೆಸುತ್ತಿದ್ದಾರೆ. ಈ ಹಿಂದೆ ಇದನ್ನು ರಾಕೇಶ್ ಸಿದ್ದರಾಮಯ್ಯ ನೋಡಿಕೊಳ್ಳುತ್ತಿದ್ದರು. ಅವರ ನಿಧನದ ನಂತರ ಕಿರುತೆರೆ ನಟ…
ಒಂದೇ ವೇದಿಕೆಯಲ್ಲಿ ರಾಜಕೀಯ ದುಷ್ಮನ್ಗಳು!
October 30, 2018ಬೆಂಗಳೂರು, ಅ.29: ಉಪಚುನಾವಣೆಯಲ್ಲಿ ಬಿಜೆಪಿ ಮಣಿಸಿ, ಮೈತ್ರಿ ಸರ್ಕಾರವನ್ನು ಮತ್ತಷ್ಟು ಗಟ್ಟಿಗೊಳಿಸುವ ಗುರಿ ಹಿನ್ನೆಲೆಯಲ್ಲಿ, ಹಾವು-ಮುಂಗುಸಿಯಂತಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 13 ವರ್ಷಗಳ ನಂತರ ಒಂದೇ ವೇದಿಕೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ. ಬಿಜೆಪಿ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ಪ್ರತಿಪಕ್ಷಗಳನ್ನು ಒಂದು ಮಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲೂ ಮೈತ್ರಿಯೊಂದಿಗೆ ಕಣಕ್ಕಿಳಿ ಯುವ ಉದ್ದೇಶದಿಂದ ತಮ್ಮೆಲ್ಲಾ ವೈಮನಸ್ಸನ್ನು ಬದಿಗಿರಿಸಿ ಮತದಾರರ ಮನವೊಲಿಸಲು ಹೊರಟಿದ್ದಾರೆ. ದೇವೇಗೌಡರ ಕುಟುಂಬದ ವಿರುದ್ಧ ಸದಾ…
ಕಾಂಗ್ರೆಸ್ ಸೇರದಿದ್ದರೆ ನಾನು ಸಿಎಂ ಆಗುತ್ತಿರಲಿಲ್ಲ
October 29, 2018ಬಾಗಲಕೋಟೆ: ಕಾಂಗ್ರೆಸ್ ಸೇರದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಇಲ್ಲಿ ಹೇಳಿದ್ದಾರೆ. ಜಮಖಂಡಿಯಲ್ಲಿ ಕುರುಬ ಸಮುದಾಯದ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿಯಾದೆ. ನಾನೇ ಮುಖ್ಯಮಂತ್ರಿ ಆಗಬೇಕೆಂದು ಶಾಸಕರೂ ನನ್ನನ್ನು ಬೆಂಬಲಿಸಿದರು ಎಂದರು. ನಾನು ಮತ್ತೆ ಮುಖ್ಯಮಂತ್ರಿ ಆಗಿ ಬಿಡುತ್ತೇನೆ ಎಂದು ಹೊಟ್ಟೆಕಿಚ್ಚಿನಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿದರು. ನಾನು ಅದಕ್ಕೆ ರಾಹು, ಕೇತು, ಶನಿ ಎಲ್ಲರೂ…
ಮತ್ತೆ ಸಿಎಂ ಆಗುವ ದುರಾಸೆ ನನಗಿಲ್ಲ
October 27, 2018ಶಿವಮೊಗ್ಗ: ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ದುರಾಸೆ ನನಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮತ್ತೊಮ್ಮೆ ಸಿಎಂ ಆಗುವ ದುರಾಸೆ ನನಗೆ ಇಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನ ಆಶೀರ್ವಾದ ಮಾಡಿದರೆ ನೋಡೋಣ ಎಂದರು. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ಅವರು, ಯಡಿಯೂರಪ್ಪ…
ಕೆಲಸ ಮಾಡಲು ಇರಿಸು ಮುರಿಸು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
October 25, 2018ಮೈಸೂರು: ಬಹಳ ವರ್ಷಗಳಿಂದ ಎದುರಾಳಿಯಾಗಿ ಹೋರಾಟ ಮಾಡಿಕೊಂಡು ಬಂದು, ಈಗ ಏಕಾಏಕಿ ಜೊತೆಯಲ್ಲಿ ಕೆಲಸ ಮಾಡಲು ಇರಿಸು ಮುರಿಸು ಉಂಟಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ಮಂಡ್ಯ ಜಿಲ್ಲೆಯಲ್ಲಿ ಉಪ ಚುನಾವಣಾ ಪ್ರಚಾರ ಕೈಗೊಳ್ಳುವ ಸಲುವಾಗಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಅಗಮಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಚುನಾವಣಾ ಪ್ರಚಾರದಲ್ಲಿ ಜೆಡಿಎಸ್-ಕಾಂಗ್ರೆಸ್ ನಡುವಿನ ಭಿನ್ನಮತದ ಬಗ್ಗೆ ತಿಳಿಸಿದರು. ಬಿಜೆಪಿಯವರೇ ಅಸ್ಥಿರರಾಗುತ್ತಿದ್ದಾರೆ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯವರೇ ಅಸ್ಥಿರರಾಗುತ್ತಿದ್ದಾರೆ. ಎಲ್ಲಾ ಐದು ಕ್ಷೇತ್ರಗಳಲ್ಲೂ…
2019ರ ಚುನಾವಣೆಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ
October 25, 2018ಮಂಡ್ಯ: ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ವಿಡುವ ಏಕೈಕ ಕಾರಣದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಲ್ಲೇ 2019ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಯನ್ನೂ ಎದುರಿಸಲು ನಿರ್ಧರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ವಾಗ್ದಾಳಿಗೆ ಇಳಿದಿದ್ದೆವು. ನಾವು ಅವರ ಮೇಲೆ, ಅವರು ನಮ್ಮ ಮೇಲೆ ಆರೋಪ, ಪ್ರತ್ಯಾರೋಪ ಮಾಡಿದ್ದು ನಿಜ. ಆದರೆ ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ. ಈ…
ಅವಳ ಹಲ್ಲೇನು ಬಿಗಿಯಾಗಿದೆಯಾ? ಶೋಭಾ ಕರಂದ್ಲಾಜೆ ವಿರುದ್ಧ ಸಿದ್ದರಾಮಯ್ಯ ಕಿಡಿ
October 22, 2018ಮೈಸೂರು: ಹಲ್ಲಿಲ್ಲದ ಹಾವು ಎಂದು ತಮ್ಮನ್ನು ಟೀಕಿಸಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದು, `ಅವಳ ಹಲ್ಲೇನು ಬಿಗಿಯಾಗಿದೆಯಾ? ಅವಳಿಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ’ ಎಂದು ಹರಿಹಾಯ್ದಿದ್ದಾರೆ. ಮೈಸೂರಿನ ತಮ್ಮ ನಿವಾಸದ ಬಳಿ ಭಾನು ವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇದೇ ಶೋಭಾ ಕರಂದ್ಲಾಜೆ ಸೋತಿಲ್ಲವೇ? ಅದನ್ನು ಮರೆತಂತಿದೆ ಎಂದು ಕಿಡಿಕಾರಿದರು. ಮೈತ್ರಿ ಸರ್ಕಾರ ಮುರಿದು ಬೀಳುತ್ತದೆ ಎಂಬ ಬಿಜೆಪಿಯವರ ಗಡುವು ಮುಗಿ…