ಚಾಮರಾಜನಗರ: ‘ರಾಜ್ಯದಲ್ಲಿ ಪರ್ಯಾಯ ರಾಜಕಾರಣದ ಉದ್ದೇಶದಿಂದ ಸ್ವರಾಜ್ ಇಂಡಿಯಾ ಪಕ್ಷವನ್ನು ಅಸ್ತಿತ್ವಕ್ಕೆ ತರಲಾಗಿದೆ. ಪಕ್ಷದ ಸಂಘಟನೆಗಾಗಿ, ಈಗಾಗಲೇ ಸದಸ್ಯತ್ವ ಅಭಿಯಾನ ಆರಂಭಿಸಲಾಗಿದೆ’ ಎಂದು ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯ ಬಡಗಲಪುರ ನಾಗೇಂದ್ರ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಇದುವರೆವಿಗೆ ಅಸ್ತಿತ್ವದಲ್ಲಿ ಇದ್ದ ಸರ್ವೋದಯ ಪಕ್ಷವು ಈಗಾಗಲೇ ಸ್ವರಾಜ್ ಇಂಡಿಯಾ ಪಕ್ಷಕ್ಕೆ ವಿಲೀನವಾಗಿದೆ. ಪಕ್ಷವನ್ನು ಬಲಿಷ್ಠಗೊಳಿಸುವ ಸಲುವಾಗಿ ರಾಜ್ಯದ್ಯಂತ ಈಗಾಗಲೇ ಸದಸ್ಯತ್ವ ಅಭಿಯಾನವನ್ನು ಆರಂಭಿಸ ಲಾಗಿದೆ. ಪಕ್ಷದ…