ಬೆಂಗಳೂರು, ಜ. 4- ನಾನು ಯಾರ ಬಗ್ಗೆಯೂ ದ್ವೇಷ ಸಾಧಿಸುವ ಪ್ರಯತ್ನ ವನ್ನೇ ಮಾಡಲಿಲ್ಲ. ಇದಕ್ಕೆ ಕಾರಣ ನನ್ನ ತಂದೆ ಬೋಧಿಸಿದ ಮೌಲ್ಯಗಳು. ಅವರು ಬೋಧಿಸಿದ ಮೌಲ್ಯಗಳು ನನ್ನನ್ನ ಆ ಕಡೆ ಈ ಕಡೆ ಕರೆದುಕೊಂಡು ಹೋಗಲಿಲ್ಲ. ಅಪ್ಪಿತಪ್ಪಿ ನನ್ನಿಂದ ಯಾರಿಗಾದರೂ ನೋವಾ ಗಿದ್ದರೆ ಮರೆತುಬಿಡಿ, ಕ್ಷಮಿಸಿಬಿಡಿ. ಪರಸ್ಪರ ನಿಂದನೆಯನ್ನು ನಿಲ್ಲಿಸಿಬಿಡಿ, ಎಲ್ಲಾ ಮುಂದೆ ಸಾಗೋಣ ಎಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಹೇಳಿದರು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಕೃಷ್ಣ ಪಥ ಹಲವು ವಿಶೇಷಗಳಿಗೆ ಸಾಕ್ಷಿಯಾ ಗಿತ್ತು. ಕೃಷ್ಣಪಥ ಸಮಿತಿಯಿಂದ…
ಮಾಜಿ ಸಿಎಂ ಎಸ್.ಎಂ.ಕೃಷ್ಣ ಹುಟ್ಟುಹಬ್ಬದ ಅಂಗವಾಗಿ ಪೌರಕಾರ್ಮಿಕರಿಗೆ ಸನ್ಮಾನ
April 30, 2019ಮೈಸೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಹುಟ್ಟು ಹಬ್ಬದ ಅಂಗವಾಗಿ ಮೇ 1ರಂದು ಮೈಸೂರಿನ ಕುವೆಂಪುನಗರದಲ್ಲಿರುವ ಅಂಬೇಡ್ಕರ್ ಉದ್ಯಾನವನದ ಮುಂಭಾಗ ಬೆಳಿಗ್ಗೆ 10.30ಕ್ಕೆ ಪೌರ ಕಾರ್ಮಿಕರಿಗೆ ಎಸ್.ಎಂ.ಕೃಷ್ಣ ಅಭಿಮಾನಿ ಬಳಗದ ವತಿ ಯಿಂದ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ. ಮಾನಸ ಗಂಗೋತ್ರಿ ಕುವೆಂಪು ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ಪ್ರಧಾನ ಗುರುದತ್ ಪೌರ ಕಾರ್ಮಿಕರನ್ನು ಸನ್ಮಾನಿ ಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಎಲ್.ನಾಗೇಂದ್ರ, ಖ್ಯಾತ ಮಧುಮೇಹ ತಜ್ಞ ಡಾ.ವಿ.ಲಕ್ಷ್ಮೀನಾರಾಯಣ, ನಗರ ಪಾಲಿಕೆ ಸದಸ್ಯ ಎಂ.ಶಿವ ಕುಮಾರ್, ಎಂ.ಸಿ.ರಮೇಶ್ ಕಾರ್ಯಕ್ರಮದಲ್ಲಿ…
ಎಸ್.ಎಂ.ಕೃಷ್ಣ ನೇತೃತ್ವದಲ್ಲಿ ಒಕ್ಕಲಿಗ ಮುಖಂಡರ ಸಭೆ
April 11, 2019ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಸಮುದಾಯದ ಮುಖಂಡರ ಸಭೆ ನಡೆಸಿ, ಬೆಂಬಲ ಕೋರುತ್ತಿರುವ ಬಿಜೆಪಿ, ಬುಧವಾರ ಮೈಸೂರಲ್ಲಿ ಒಕ್ಕಲಿಗ ನಾಯಕರು ಹಾಗೂ ಮುಖಂಡರ ಸಭೆ ನಡೆಸಿತು. ಮೈಸೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದ್ಧಿ ಎಸ್. ಎಂ.ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಒಕ್ಕಲಿಗ ಮುಖಂಡರ ಗೌಪ್ಯ ಸಭೆಯಲ್ಲಿ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಪ್ರತಾಪ ಸಿಂಹ, ಶಾಸಕ ಎಲ್.ನಾಗೇಂದ್ರ, ವಿಧಾನ ಪರಿಷತ್ ಮಾಜಿ…
ಮೋದಿ ಆಳ್ವಿಕೆ ದೇಶಕ್ಕೆ ನೀಡಿರುವ ಅತ್ಯಂತ ಶ್ರೇಷ್ಠ ಕೊಡುಗೆ
April 10, 2019ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರದ್ದು ಕಳಂಕ ರಹಿತ ನಾಯಕತ್ವ. ಭ್ರಷ್ಟಾ ಚಾರ ಸುಳಿಯಲೂ ಅವಕಾಶ ನೀಡದೆ 5 ವರ್ಷ ಆಡಳಿತ ನಡೆಸಿರುವುದು ಅವರು ದೇಶಕ್ಕೆ ನೀಡಿರುವ ಅತ್ಯಂತ ಶ್ರೇಷ್ಠ ಕೊಡುಗೆ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಬಣ್ಣಿಸಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಂಗಳವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಮಾತನಾಡಿದ ಅವರು, ವಿಶ್ವ ನಾಯಕರ ಸಮಾನರಾಗಿ ನಿಂತಿರುವ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಮರ್ಪಿ ಸುತ್ತೇನೆ….
ರಾಜ್ಯ ರಾಜಕಾರಣದಿಂದ ತಮ್ಮನ್ನು ಹೊರ ಹಾಕುವಲ್ಲಿ ಷಡ್ಯಂತ್ರ
April 4, 2019ಬೆಂಗಳೂರು: ಮಾಹಿತಿ ತಂತ್ರ ಜ್ಞಾನ ಬೆಳವಣಿಗೆ ಹಾಗೂ ಬೆಂಗಳೂರು ಅಭಿವೃದ್ಧಿ ತಡೆಗಟ್ಟುವ ಉದ್ದೇಶದಿಂದ ನನ್ನನ್ನು ಕರ್ನಾಟಕ ರಾಜ್ಯ ರಾಜಕೀಯದಿಂದಲೇ ಹೊರಹಾಕಲು ಷಡ್ಯಂತ್ರ ನಡೆಯಿತು ಎಂದು ಕೇಂದ್ರದ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಇಂದಿಲ್ಲಿ ಒಡಲಾಳದ ರಹಸ್ಯವನ್ನು ಬಹಿರಂಗಪಡಿಸಿದರು. ಬೆಂಗಳೂರು ವರದಿಗಾರರ ಕೂಟ ಹಾಗೂ ಪ್ರೆಸ್ ಕ್ಲಬ್ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತ ನಾಡಿದ ಅವರು, 2004ರ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿ ರಲಿಲ್ಲ. ನನ್ನ ನಾಯಕತ್ವದಲ್ಲಿ ಕಾಂಗ್ರೆಸ್ನ 65 ಶಾಸಕರು ಮಾತ್ರ ಆಯ್ಕೆಗೊಂಡಿದ್ದರು,…
ಕೃಷ್ಣ-ಯಡಿಯೂರಪ್ಪ ಭೇಟಿ: ಸುಮಲತಾ ಸ್ಪರ್ಧೆ ಕುರಿತು ಚರ್ಚೆ
March 17, 2019ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸೆಣಸಾಡುತ್ತಿರುವ ಮಾಜಿ ಸಚಿವ, ದಿವಂಗತ ನಟ ಅಂಬರೀಶ್ ಪತ್ನಿ ಸುಮ ಲತಾ ಅವರಿಗೆ ಬೆಂಬಲ ನೀಡಬೇಕೇ? ಬೇಡವೇ? ಎಂಬ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ-ಬಿ.ಎಸ್. ಯಡಿಯೂರಪ್ಪ ಚರ್ಚೆ ನಡೆಸಿದರು. ಇಂದು ಮಧ್ಯಾಹ್ನ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವರೂ ಆದ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಒಂದು ಗಂಟೆ…
ಅಧಿಕಾರವೆಲ್ಲಾ ಡಾ.ಮನಮೋಹನ್ಸಿಂಗ್ ಕೈಲಿ, ಆಡಳಿತವೆಲ್ಲಾ ರಾಹುಲ್ ಗಾಂಧಿ ಕೈಯಲ್ಲಿ…
February 10, 2019ಮಂಡ್ಯ: ಕೇಂದ್ರದ ಯುಪಿಎ ಸರ್ಕಾರದಲ್ಲಿ ಡಾ.ಮನ ಮೋಹನ್ಸಿಂಗ್ ಹೆಸರಿಗಷ್ಟೇ ಪ್ರಧಾನಿಯಾಗಿದ್ದರು. ಆಡಳಿತವೆಲ್ಲಾ ರಾಹುಲ್ ಗಾಂಧಿ ಕೈಲಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಯುಪಿಎ ಸರ್ಕಾರದ ಆಡಳಿತ ವೈಖರಿಯನ್ನು ತೆರೆದಿಟ್ಟರು. ನಗರದ ಬಿಜಿಎಸ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದಲ್ಲಿ ಯಾವುದೇ ಅಧಿಕಾರವಿಲ್ಲದ ರಾಹುಲ್ ಗಾಂಧಿ ಫರ್ಮಾನುಗಳನ್ನು ಹೊರಡಿಸುತ್ತಿದ್ದರು. ಇದರಿಂದ ಕ್ಯಾಬಿನೆಟ್ನಲ್ಲಿ ತೆಗೆದುಕೊಂಡ ತೀರ್ಮಾನಗಳಿಗೆ ಬೆಲೆಯೇ ಇಲ್ಲವಾಗಿತ್ತು ಎಂದರು. 2004ರಿಂದ 14ರವರೆಗೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. 2009 ರಿಂದ…
ಪ್ರಧಾನಿ ಮೋದಿ ಲಂಚಮುಕ್ತ ಆಡಳಿತ ನೀಡಿದ್ದಾರೆ
January 28, 2019ಮಂಡ್ಯ: ಕಳೆದ ಐದು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲಂಚಮುಕ್ತ ಆಡಳಿತ ನೀಡಿದ್ದಾರೆ. ಹೀಗಾಗಿ ಮುಂದಿನ ಐದು ವರ್ಷಕ್ಕೂ ಮೋದಿ ಅವರಿಗೇ ಆಡಳಿತ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ಮಂಡ್ಯದಲ್ಲಿ ಶನಿವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು ಭಾರತ ಒಬ್ಬ ಸಮರ್ಥ ನಾಯಕನ ಹುಡುಕಾಟದಲ್ಲಿತ್ತು. ಆ ಸ್ಥಾನವನ್ನು ಮೋದಿ ಅವರು, ತುಂಬಿದ್ದಾರೆ. ಕಳೆದ 5 ವರ್ಷದಲ್ಲಿ ಮೋದಿ ಅವರು ಉತ್ತಮ ಆಡಳಿತ ನೀಡಿದ್ದಾರೆ. ಶಕ್ತಿಶಾಲಿ ಆಡಳಿತದ ಮೂಲಕ ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ…