ಪಿರಿಯಾಪಟ್ಟಣ: ಆನೆಚೌಕೂರು ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖಾ ಸಿಬ್ಬಂದಿ ಮಾಲು ಸಮೇತ ಬಂಧಿಸಿರುವ ಘಟನೆ ಭಾನುವಾರ ನಡೆದಿದೆ. ಹುಣಸೂರು ತಾಲೂಕಿನ ಬೀರತಮ್ಮನಹಳ್ಳಿ ಗಿರಿಜನ ಹಾಡಿಯ ಸ್ವಾಮಿ, ನಾಗ, ಮತ್ತು ಮನುಗನಹಳ್ಳಿ ಗ್ರಾಮದ ಮಂಜು ಬಂಧಿತ ರಾಗಿದ್ದು, ತಾಲೂಕಿನ ಆನೆಚೌಕೂರು ಅರಣ್ಯ ವಲಯದಲ್ಲಿ ಭಾನುವಾರ ಆನೆಚೌಕೂರು ಅರಣ್ಯ ವಲಯ ಅಂಕಣ 5 ರ ಕುದುರೆ ಬಿದ್ದಹಳ್ಳಿ ಬಳಿಯ ಅರಣ್ಯದಲ್ಲಿ ಶ್ರೀಗಂಧದ ಮರಗಳನ್ನು ಕಡಿದು ಸಾಗಾಣೆ ಮಾಡಲು ಯತ್ನಿಸುತ್ತಿದ್ದರು ಎನ್ನಲಾಗಿದೆ. ಈ…