ಶ್ರವಣಬೆಳಗೊಳ: ಸೊಲ್ಲಾಪುರದಿಂದ ಯಶವಂತಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಸೊಲ್ಲಾಪುರ ಎಕ್ಸ್ ಪ್ರೆಸ್ ರೈಲು ಸಂಚರವನ್ನು ಹಾಸನದವರೆಗೆ ವಿಸ್ತರಿಸಲಾಗಿದ್ದು, ಈ ರೈಲಿಗೆ ಶ್ರವಣಬೆಳಗೊಳದ ರೈಲ್ವೆ ನಿಲ್ದಾಣದಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಪೂರ್ಣಕುಂಭ ಸ್ವಾಗತ ಕೋರಿದರು. ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಭಗವಾನ್ ಬಾಹುಬಲಿ, ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಆಶೀರ್ವಾದ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪರಿಶ್ರಮದಿಂದ ಮತ್ತೊಂದು ರೈಲು ಸಂಚಾರಕ್ಕೆ ಚಾಲನೆ ದೊರೆತಿದ್ದು, ಈ ಭಾಗದ ಪ್ರವಾಸೋ ದ್ಯಮ ಬೆಳೆಯಲು ಸಾಧ್ಯವಾಗಲಿದೆ ಎಂದರು. ಮಂತ್ರಾಲಯ, ರಾಯಚೂರು, ಕಲ್ಬುರ್ಗಿ,…