ವಿರಾಜಪೇಟೆ: ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಅಗಾಗ ಕಡಿತಗೊಳ್ಳುವುದರಿಂದ ಜನರಿಗೆ ಸೋಲಾರ್ ಲೈಟ್ನ ಅವಶ್ಯಕತೆ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿರಾಜಪೇಟೆ ಸಮೀ ಪದ ಹೆಗ್ಗಳ ಗ್ರಾಮದ ರಾಮನಗರದ ಶ್ರೀ ಅಯ್ಯಪ್ಪ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಯೋಜನೆಯ ಸದಸ್ಯರಿಗೆ ಸೋಲಾರ್ ಲೈಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತ ನಾಡಿದ ಮಹೇಶ್ ಗಣಪತಿ ಗ್ರಾಮಾಂತರ ಪ್ರದೇಶದಲ್ಲಿ ಮಳೆಗಾಲ, ಬೇಸಿಗೆ ಎನ್ನದೆ ವಿದ್ಯುತ್…