ಹಾಸನ: ಸಮಾಜದಲ್ಲಿ ವಿವಿಧ ರೀತಿಯಲ್ಲಿ ನಡೆಯುತ್ತಿರುವ ಅಪರಾಧ ನಿಯಂತ್ರಣಕ್ಕೆ ಎಲ್ಲರೂ ಸಹಕರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ಗೌಡ ಮನವಿ ಮಾಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಗರ ಪೊಲೀಸ್ ಠಾಣೆ ಸಂಯು ಕ್ತಾಶ್ರಯದಲ್ಲಿ ಗುರುವಾರ ಸಂಜೆ ಹಮ್ಮಿ ಕೊಳ್ಳಲಾಗಿದ್ದ ಹಾಸನ ಜಿಲ್ಲಾ ಪೊಲೀಸ್ ಅಪರಾಧ ತಡೆ ಮಾಸಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಪ ರಾಧ ತಡೆಯಲು ಮೊದಲು ಸಾರ್ವಜನಿ ಕರಲ್ಲಿ ಅರಿವು ಮೂಡಿಸಬೇಕು. ಅಪರಾಧ ಮಾಡಿದವನಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ. ಅಪ ರಾಧ ಮಾಡುವ ಮೊದಲು ನಿಮ್ಮ ಕುಟುಂಬ…